ಚಿಕ್ಕಮಗಳೂರು: ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಮೆಸ್ಕಾಂ ಸಿಬ್ಬಂದಿ ವಿರುದ್ಧ ಎಫ್ಐಆರ್
ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಯಲ್ಲಿ ಎಣ್ಣಿ ಪಾರ್ಟಿ ಮಾಡಿದ್ದ ಮೆಸ್ಕಾಂ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಮೂಲದ ಮೆಸ್ಕಾಂ ಸಿಬ್ಬಂದಿ ಚಿದಾನಂದ ತನ್ನ ಆರು ಜನ ಸ್ನೇಹಿತರೊಂದಿಗೆ ಸೇರಿ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾನೆ. ಪ್ರಶ್ನಿಸಿದ್ದಕ್ಕೆ ಸ್ಥಳೀಯರಿಗೆ ದಮ್ಕಿ ಹಾಕಿದ್ದಾನೆ.
ಚಿಕ್ಕಮಗಳೂರು, ನವೆಂಬರ್ 14: ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಮೆಸ್ಕಾಂ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಮೂಲದ ಮೆಸ್ಕಾಂ ಸಿಬ್ಬಂದಿ ಚಿದಾನಂದ ತನ್ನ ಆರು ಜನ ಸ್ನೇಹಿತರೊಂದಿಗೆ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದನು. ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮದ್ಯ ಸೇವಿಸಿ ನೂರಾರು ಪ್ರವಾಸಿಗರೆದುರು ಗಲಾಟೆ ಮಾಡುತ್ತಿದ್ದನು. ಮದ್ಯ ಸೇವಿಸದಂತೆ ಹೇಳಿದ್ದಕ್ಕೆ ಪ್ರವಾಸಿಗರಿಗೆ ಧಮ್ಕಿ ಹಾಕಿದ್ದನು. ವಿಚಾರ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆತನ ಕಾರನ್ನು ಪರಿಶೀಲಿಸಿದಾಗ ಮದ್ಯದ ಬಾಟಲಿಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಮೆಸ್ಕಾಂ ಸಿಬ್ಬಂದಿ ಚಿದಾನಂದ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹಾಗೇ ಮೆಸ್ಕಾಂ ಸಿಬ್ಬಂದಿ ಚಿದಾನಂದನ ಕಾರು ಸೀಜ್ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 14, 2024 08:46 AM
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ

