AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP MLA in trouble: ಗಣಿಗಾರಿಕೆಗಾಗಿ ಅನುಮತಿ ಪಡೆಯದೆ ಸ್ಫೋಟಕಗಳನ್ನು ಬಳಸಿದ ಅರೋಪದಲ್ಲಿ ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್

BJP MLA in trouble: ಗಣಿಗಾರಿಕೆಗಾಗಿ ಅನುಮತಿ ಪಡೆಯದೆ ಸ್ಫೋಟಕಗಳನ್ನು ಬಳಸಿದ ಅರೋಪದಲ್ಲಿ ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 13, 2023 | 11:24 AM

ದೂರಿನ ಅನ್ವಯ ಚಿಕ್ಕಜಾಲ ಪೊಲೀಸರು ಶಾಸಕ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಹಿಂದೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತವಲಯದಲ್ಲಿ ಗರುತಿಸಿಕೊಂಡಿದ್ದ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು (Munirathna Naidu) ಮತ್ತು ಇತರ ಮೂವರ ವಿರುದ್ದ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಒಂದು ಎಫ್ ಐಆರ್ (FIR) ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಮುನಿರತ್ನ ಮತ್ತು ಅವರ ಸಂಗಡಿಗರು ಬೆಂಗಳೂರು ಉತ್ತರ (Bengaluru North ) ತಾಲ್ಲೂಕಿನ ಹುಣಸನಮಾರನಹಳ್ಳಿ ಬಳಿ ತಾವು ಖರೀದಿಸಿದ ಜಮೀನಿನಲ್ಲಿ ಗಣಿಗಾರಿಕೆ ನಡೆಸುತ್ತಿದ್ದು ಅನುಮತಿ ಪಡೆಯದೆ ಜಿಲೆಟಿನ್ ಅನ್ನು ಬಳಸಿ ಸ್ಫೋಟಗಳನ್ನು ನಡೆಸಿದ್ದಾರೆ. ಸ್ಥಳೀಯರು ಸ್ಪೋಟಕಗಳನ್ನು ಬಳಸಿದ್ದರ ವಿರುದ್ಧ ಪ್ರತಿಭಟನೆ ನಡೆಸಿದ ಬಳಿಕ ಯಲಹಂಕ ತಹಸೀಲ್ದಾರ್ ಅನಿಲ್ ಅರಳೋಕರ್ ಚಿಕ್ಕಜಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಚಿಕ್ಕಜಾಲ ಪೊಲೀಸರು ಶಾಸಕ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ