Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahakumbh: ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ಹೊತ್ತಿ ಉರಿದ ಬೆಂಕಿ

Mahakumbh: ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ಹೊತ್ತಿ ಉರಿದ ಬೆಂಕಿ

ಸುಷ್ಮಾ ಚಕ್ರೆ
|

Updated on: Jan 30, 2025 | 8:31 PM

ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದವು. ಬೆಂಕಿಯನ್ನು ನಂದಿಸಲು ಎರಡು ಅಗ್ನಿಶಾಮಕ ದಳಗಳನ್ನು ನಿಯೋಜಿಸಲಾಯಿತು. ಬುಧವಾರ ಮುಂಜಾನೆ ಮಹಾಕುಂಭದ ಸಂಗಮ ಪ್ರದೇಶದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಪ್ರಾಣ ಕಳೆದುಕೊಂಡಿದ್ದರು ಮತ್ತು 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಪ್ರಯಾಗ್​ರಾಜ್​: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದ ಸೆಕ್ಟರ್ 22ರಲ್ಲಿ ಝುನ್ಸಿ ಛತ್ನಾಗ್ ಘಾಟ್ ಮತ್ತು ನಾಗೇಶ್ವರ ಘಾಟ್ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಹಲವಾರು ಡೇರೆಗಳು ಸುಟ್ಟು ಬೂದಿಯಾಗಿವೆ. ಬುಧವಾರ ಕಾಲ್ತುಳಿತದಿಂದ 30 ಜನ ಮೃತಪಟ್ಟ ಬೆನ್ನಲ್ಲೇ ಇಂದು ಈ ಬೆಂಕಿ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ