AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ನಡುಗಡ್ಡೆಯಂತಾದ ದೇವಸ್ಥಾನವೊಂದರಲ್ಲಿ ಸಿಲುಕಿದ್ದ ಭಕ್ತರನ್ನು ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

ಹಾವೇರಿ: ನಡುಗಡ್ಡೆಯಂತಾದ ದೇವಸ್ಥಾನವೊಂದರಲ್ಲಿ ಸಿಲುಕಿದ್ದ ಭಕ್ತರನ್ನು ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 21, 2024 | 12:26 PM

Share

ಬಾಜೀರಾಬ್ ಹಳ್ಳದಲ್ಲಿ ನೀರು ಯಾವಮಟ್ಟಿಗೆ ಹರಿಯುತ್ತಿದೆ ಎಂದರೆ ಭಕ್ತರು ರಾತ್ರಿ ಉಳಿದುಕೊಂಡಿದ್ದ ರಾಮಲಿಂಗೇಶ್ವರ ದೇವಸ್ಥಾನವು ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಭಕ್ತರಿಗೆ ಹಳ್ಳ ಉಕ್ಕಿದ್ದು ಬೆಳಗ್ಗೆಯಷ್ಟೇ ಗೊತ್ತಾಗಿದೆ. ನಮ್ಮ ಹಾವೇರಿ ವರದಿಗಾರ ಭಕ್ತರು ಮತ್ತು ಆಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಮಾತಾಡಿದ್ದಾರೆ.

ಹಾವೇರಿ: ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಮಳೆಯಿಂದ ಸವಣೂರು ತಾಲ್ಲೂಕಿನ ಬಹಾದೂರ್​ಪುರ ಗ್ರಾಮದಲ್ಲಿ ಹರಿಯುವ ಬಾಜೀರಾಬ್ ಹಳ್ಳವು ಉಕ್ಕಿ ಹರಿದ ಕಾರಣ ಜಿಲ್ಲೆಯ ಬೇರೆಬೇರೆ ಊರುಗಳಿಂದ ಪಂಢಾರಾಪುರಕ್ಕೆ ಪಾದಯಾತ್ರೆಯ ಮೂಲಕ ಹೊರಟಿದ್ದ 28 ಜನ ಭಕ್ತರು ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಸಿಲುಕಿಕೊಂಡಿದ್ದಾರೆ. ಬಹಾದೂರ್​ಪುರ ಗ್ರಾಮಸ್ಥರು ಭಕ್ತರು ಸಿಲುಕಿಕೊಂಡಿರುವುದನ್ನು ಕಂಡು ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ. ಬೋಟ್ ಮೂಲಕ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಯು ಎಲ್ಲ ಭಕ್ತರನ್ನು ರಕ್ಷಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಳೆ ಅವಾಂತರ: ಬೆಂಗಳೂರಿನ ರಸ್ತೆಗಳಲ್ಲಿ ನಿಂತ ನೀರು, ವಾಹನ ಸಂಚಾರಕ್ಕೆ ಅಡ್ಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.