ಹಾವೇರಿ: ನಡುಗಡ್ಡೆಯಂತಾದ ದೇವಸ್ಥಾನವೊಂದರಲ್ಲಿ ಸಿಲುಕಿದ್ದ ಭಕ್ತರನ್ನು ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

ಹಾವೇರಿ: ನಡುಗಡ್ಡೆಯಂತಾದ ದೇವಸ್ಥಾನವೊಂದರಲ್ಲಿ ಸಿಲುಕಿದ್ದ ಭಕ್ತರನ್ನು ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ
|

Updated on: Oct 21, 2024 | 12:26 PM

ಬಾಜೀರಾಬ್ ಹಳ್ಳದಲ್ಲಿ ನೀರು ಯಾವಮಟ್ಟಿಗೆ ಹರಿಯುತ್ತಿದೆ ಎಂದರೆ ಭಕ್ತರು ರಾತ್ರಿ ಉಳಿದುಕೊಂಡಿದ್ದ ರಾಮಲಿಂಗೇಶ್ವರ ದೇವಸ್ಥಾನವು ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಭಕ್ತರಿಗೆ ಹಳ್ಳ ಉಕ್ಕಿದ್ದು ಬೆಳಗ್ಗೆಯಷ್ಟೇ ಗೊತ್ತಾಗಿದೆ. ನಮ್ಮ ಹಾವೇರಿ ವರದಿಗಾರ ಭಕ್ತರು ಮತ್ತು ಆಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಮಾತಾಡಿದ್ದಾರೆ.

ಹಾವೇರಿ: ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಮಳೆಯಿಂದ ಸವಣೂರು ತಾಲ್ಲೂಕಿನ ಬಹಾದೂರ್​ಪುರ ಗ್ರಾಮದಲ್ಲಿ ಹರಿಯುವ ಬಾಜೀರಾಬ್ ಹಳ್ಳವು ಉಕ್ಕಿ ಹರಿದ ಕಾರಣ ಜಿಲ್ಲೆಯ ಬೇರೆಬೇರೆ ಊರುಗಳಿಂದ ಪಂಢಾರಾಪುರಕ್ಕೆ ಪಾದಯಾತ್ರೆಯ ಮೂಲಕ ಹೊರಟಿದ್ದ 28 ಜನ ಭಕ್ತರು ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಸಿಲುಕಿಕೊಂಡಿದ್ದಾರೆ. ಬಹಾದೂರ್​ಪುರ ಗ್ರಾಮಸ್ಥರು ಭಕ್ತರು ಸಿಲುಕಿಕೊಂಡಿರುವುದನ್ನು ಕಂಡು ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ. ಬೋಟ್ ಮೂಲಕ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಯು ಎಲ್ಲ ಭಕ್ತರನ್ನು ರಕ್ಷಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಳೆ ಅವಾಂತರ: ಬೆಂಗಳೂರಿನ ರಸ್ತೆಗಳಲ್ಲಿ ನಿಂತ ನೀರು, ವಾಹನ ಸಂಚಾರಕ್ಕೆ ಅಡ್ಡಿ

Follow us