AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈ ಭೀಮ್ ಎಂದು ಮಾತು ಅರಂಭಿಸಿದ ಜಮೀರ್ ಅಹ್ಮದ್ ನಾನು ಮೊದಲು ಹಿಂದುಸ್ತಾನಿ, ನಂತರ ಕನ್ನಡಿಗ ಅಮೇಲೆ ಒಬ್ಬ ಮುಸಲ್ಮಾನ ಎಂದರು!

ಜೈ ಭೀಮ್ ಎಂದು ಮಾತು ಅರಂಭಿಸಿದ ಜಮೀರ್ ಅಹ್ಮದ್ ನಾನು ಮೊದಲು ಹಿಂದುಸ್ತಾನಿ, ನಂತರ ಕನ್ನಡಿಗ ಅಮೇಲೆ ಒಬ್ಬ ಮುಸಲ್ಮಾನ ಎಂದರು!

ಅರುಣ್​ ಕುಮಾರ್​ ಬೆಳ್ಳಿ
|

Updated on:May 04, 2024 | 5:36 PM

Share

ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರು ಹುಟ್ಟಿರದಿದ್ದರೆ, ನಮ್ಮ ಅಸ್ತಿತ್ವವೇ ಇರುತ್ತಿರಲಿಲ್ಲ ಮತ್ತು ತಾನು ಹೀಗೆ ನಿಮ್ಮ ಮುಂದೆ ಬಂದು ಮಾತಾಡುವುದು ಸಾಧ್ಯವಿರಲಿಲ್ಲ ಎಂದು ಹೇಳುವ ಅವರು, ನಮಗೆ ಈ ಸ್ಥಾನಮಾನ ಕೊಡಿಸಿದ ಅಂಬೇಡ್ಕರ್ ಅವರನ್ನು ನೆನೆಯುವುದು ಅತ್ಯಂತ ಅವಶ್ಯಕವಾಗಿದೆ ಎನ್ನುತ್ತಾರೆ.

ಬಾಗಲಕೋಟೆ: ನಗರದಲ್ಲಿಂದು ಆಯೋಜಿಸಲಾಗಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ (minorities convention) ಭಾಗಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ (Samyukta Patil) ಪರ ಮತ ಯಾಚಿಸಿದ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ತಮ್ಮ ಭಾಷಣದಲ್ಲಿ ಹೊಸ ವೈಖರಿಯನ್ನು ಅನುಸರಿಸಿದರು. ಇದು ಅಲ್ಪಸಂಖ್ಯಾತರ ಸಮಾವೇಶವಾದ ಕಾರಣ ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಅವರಲ್ಲಿ ಹಲವರಿಗೆ ಮಂತ್ರಿ ಜೊತೆ ವೇದಿಕೆ ಮೇಲೆ ಕಾಣಿಸಿಕೊಳ್ಳುವ ಆಸೆ. ಹಾಗಾಗಿ ಜಮೀರ್ ಭಾಷಣ ಮಾಡುತ್ತಿದ್ದ ಪೋಡಿಯಂ ಬಳಿ ಜನಜಂಗುಳಿ! ಅಸ್ಸಾಲಂ ವಾಲೇಕುಂ ಅಂತ ಭಾಷಣ ಆರಂಭಿಸುವ ಸಚಿವ ಜೈ ಭೀಮ್ ಅನ್ನುತ್ತಾರೆ! ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರು ಹುಟ್ಟಿರದಿದ್ದರೆ, ನಮ್ಮ ಅಸ್ತಿತ್ವವೇ ಇರುತ್ತಿರಲಿಲ್ಲ ಮತ್ತು ತಾನು ಹೀಗೆ ನಿಮ್ಮ ಮುಂದೆ ಬಂದು ಮಾತಾಡುವುದು ಸಾಧ್ಯವಿರಲಿಲ್ಲ ಎಂದು ಹೇಳುವ ಅವರು, ನಮಗೆ ಈ ಸ್ಥಾನಮಾನ ಕೊಡಿಸಿದ ಅಂಬೇಡ್ಕರ್ ಅವರನ್ನು ನೆನೆಯುವುದು ಅತ್ಯಂತ ಅವಶ್ಯಕವಾಗಿದೆ ಎನ್ನುತ್ತಾರೆ. ಸಮಾವೇಶದಲ್ಲಿ ಅಲ್ಪಸಂಖ್ಯಾತರೇ ಜಾಸ್ತಿ ಸಂಖ್ಯೆಯಲ್ಲಿರುವುದರಿಂದ ತಾನು ಉರ್ದುನಲ್ಲಿ ಮಾತಾಡುತ್ತೇನೆಂದು ಜಮೀರ್ ಅಹ್ಮದ್ ಹೇಳಿ; ಯಾರೂ ತಪ್ಪು ಕಲ್ಪಿಸಿಕೊಳ್ಳಬಾರದು, ಎಲ್ಲಕ್ಕೂ ಮೊದಲು ನಾನು ಹಿಂದೂಸ್ತಾನಿ, ನಂತರ ಕನ್ನಡಿಗ ಅಮೇಲೆ ಮುಸಲ್ಮಾನ ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ, ಪತಿಗಿಂತ ಸಂಯುಕ್ತ ಪಾಟೀಲ್ ಶ್ರೀಮಂತೆ

Published on: May 04, 2024 05:35 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More