Beeper Joy: ಚಂಡಮಾರುತ ಅಪ್ಪಳಿಸುವ ಮೊದಲೇ ಸಮುದ್ರದಲ್ಲಿ ಬುಡಮೇಲಾಯ್ತು ಮೀನುಗಾರರ ದೋಣಿ!

Updated on: Jun 15, 2023 | 5:31 PM

ಕರಾವಳಿ ಅಂಚಿಗಿದ್ದ ಹಲವಾರು ಮನೆಗಳು ಭಾರೀ ಪ್ರಮಾಣದಲ್ಲಿ ಹಾನಿ ಅನುಭವಿಸಿವೆ ಎಂದು ಮೂಲಗಳಿಂದ ಗೊತ್ತಾಗಿದೆ.

ಗುಜರಾತ್: ಇದಿನ್ನೂ ಬೀಪರ್ ಜಾಯ್ ಚಂಡಮಾರುತ ಮಾಂಡವೀ ಸಮುದ್ರ ತೀರಕ್ಕೆ ಅಪ್ಪಳಿಸಲಿದೆ ಅಂತ ಸೂಚನೆ ನೀಡುವ ಜೋರು ಗಾಳಿ, ಅಷ್ಟೇ. ಈ ಬಿರುಗಾಳಿಗೆ, ಸೋಮನಾಥ್ ಜಿಲ್ಲೆಯ ಸಮುದ್ರ ತೀರದಲ್ಲಿ ತಲ್ಲಣ ಶುರುವಾಗಿದೆ. ಅರಬ್ಬೀ ಸಮುದ್ರ ತೀರದಲ್ಲಿದ್ದ ಮೀನುಗಾರ ದೋಣಿಯೊಂದು ನೀರಲ್ಲಿ ಬುಡಮೇಲಾಗುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು. ಕರಾವಳಿ ಅಂಚಿಗಿದ್ದ ಹಲವಾರು ಮನೆಗಳು ಭಾರೀ ಪ್ರಮಾಣದಲ್ಲಿ ಹಾನಿ ಅನುಭವಿಸಲಿವೆ ಎಂದು ಮೂಲಗಳಿಂದ ಗೊತ್ತಾಗಿದೆ. ಕೇವಲ ಸೋಮನಾಥ್ ಜಿಲ್ಲೆ ಮಾತ್ರವಲ್ಲ, ರಾಜ್ಯದ ಸಮುದ್ರ ತೀರಕ್ಕಿರುವ ಕಛ್, ಜುನಾಗಢ್, ದ್ವಾರಕಾ, ಪೋರ್ ಬಂದರ್, ಮಾಂಡವಿ, ಗಾಂಧಿನಗರ, ಮೊರ್ಬಿ, ಸೌರಾಷ್ಟ್ರಗಳಲ್ಲೂ ಬೀಪರ್ ಜಾಯ್ ಚಂಡಮಾರುತ ಭಾರೀ ಪ್ರಮಾಣದಲ್ಲಿ ಹಾನಿಯುಂಟು ಮಾಡಬಹುದುದೆಂದು ಹೇಳಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More