Video: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ, ಐವರು ಸಜೀವದಹನ

Updated on: Apr 30, 2026 | 12:13 PM

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಅಲ್ವಾರ್ ಜಿಲ್ಲೆಯ ಲಕ್ಷ್ಮಣ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮೌಜ್‌ಪುರ ಬಳಿ, ಚಲಿಸುತ್ತಿದ್ದ ಕಾರೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿದ್ದಾರೆ. ಮೃತರನ್ನು ಮಧ್ಯಪ್ರದೇಶದ ಶಿಯೋಪುರದವರು ಎಂದು ಗುರುತಿಸಲಾಗಿದ್ದು, ಇವರಲ್ಲಿ ಮೂವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದ್ದಾರೆ. ಕೋಟಾ ಕಡೆಗೆ ಪ್ರಯಾಣಿಸುತ್ತಿದ್ದ ವಾಹನದಲ್ಲಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಾರು ಹೊತ್ತಿ ಉರಿಯಿತು.

ಜೈಪುರ, ಏಪ್ರಿಲ್ 30: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಅಲ್ವಾರ್ ಜಿಲ್ಲೆಯ ಲಕ್ಷ್ಮಣ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮೌಜ್‌ಪುರ ಬಳಿ, ಚಲಿಸುತ್ತಿದ್ದ ಕಾರೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿದ್ದಾರೆ. ಮೃತರನ್ನು ಮಧ್ಯಪ್ರದೇಶದ ಶಿಯೋಪುರದವರು ಎಂದು ಗುರುತಿಸಲಾಗಿದ್ದು, ಇವರಲ್ಲಿ ಮೂವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದ್ದಾರೆ.
ಕೋಟಾ ಕಡೆಗೆ ಪ್ರಯಾಣಿಸುತ್ತಿದ್ದ ವಾಹನದಲ್ಲಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಾರು ಹೊತ್ತಿ ಉರಿಯಿತು.

ಅಪಘಾತದ ಸಮಯದಲ್ಲಿ ಚಾಲಕ ವಿನೋದ್ ಕುಮಾರ್ ಮೆಹರ್ ವಾಹನದಿಂದ ಹೊರಕ್ಕೆ ಜಿಗಿದು ಬದುಕುಳಿದಿದ್ದರೂ, ಶೇ. 80ರಷ್ಟು ಸುಟ್ಟ ಗಾಯಗಳಾಗಿರುವುದರಿಂದ ಅವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Follow Us