ಮಳೆಯಿಂದ ಶಿಥಿಲಗೊಂಡಿರುವ ಸೇತುವೆಗಳ ದುರಸ್ತಿ ಕಾರ್ಯಕ್ಕೆ ಪ್ರಾಮುಖ್ಯತೆ ನೀಡಲಾಗುವುದು: ಸತೀಶ್ ಜಾರಕಿಹೊಳಿ

Updated on: Jan 01, 2025 | 4:25 PM

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾತಾಡಿದ ಸತೀಶ್ ಜಾರಕಿಹೊಳಿ, ಅದರ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವವರು ದೆಹಲಿ ವರಿಷ್ಠರು, ಈಗಿರುವವರನ್ನೇ ಮುಂದುವರಿಸಬೇಕೋ ಅಥವಾ ಹೊಸಬರನ್ನು ನೇಮಕ ಮಾಡಬೇಕೋ ಅನ್ನೋದು ಹೈಕಮಾಂಡ್​ಗೆ ಬಿಟ್ಟ ವಿಚಾರ, ತಾನು ಅದರ ಬಗ್ಗೆ ಯೋಚಿಸುವ ಗೋಜಿಗೆ ಹೋಗಿಲ್ಲ ಎಂದರು.

ಬೆಳಗಾವಿ: ಜಿಲ್ಲೆಯಲ್ಲಿ ಅನಾಹುತಕಾರಿ ಮಳೆಯಿಂದಾಗಿ ಬಹಳಷ್ಟು ಸೇತುವೆಗಳು ಶಿಥಿಲಗೊಂಡಿವೆ, ಅವುಗಳ ದುರಸ್ತಿ ಆಗಬೇಕಿದೆ, ಈ ಬಾರಿಯ ಬಿಜೆಟ್ ನಲ್ಲಿ ವಿಶೇಷ ಅನುದಾನ ಪಡೆಯುವ ಪ್ರಯತ್ನ ಮಾಡಿ ಬ್ರಿಜ್ ಗಳ ರಿಪೇರಿ ಕಾಮಗಾರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದು ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ರಸ್ತೆಗಳ ದುರಸ್ತಿಗೆ ಈಗಾಗಲೇ ₹ 4,000 ಕೋಟಿ ಅನುದಾನವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ ಸಚಿವ, ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಪಕ್ಷಾತೀತವಾಗಿ ಅಭ್ಯರ್ಥಿಯೊಬ್ಬರ ಹೆಸರು ಅಂತಿಮಗೊಳಿಸಲಾಗಿದೆ, ಅವರ ಹೆಸರು ಅನುಮೋದನೆ ಪಡೆಯುವ ನಿರೀಕ್ಷೆ ಇದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್​ಗೆ ನೂತನ ಅಧ್ಯಕ್ಷರ ಆಯ್ಕೆ, ಸತೀಶ್ ಜಾರಕಿಹೊಳಿ ಕೈ ಮೇಲುಗೈ   

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More