Bharath Jodo Yatra: ಪ್ರತಿಕೂಲ ಹವಾಮಾನ ಹಿನ್ನೆಲೆ ದೆಹಲಿ-ಶ್ರೀನಗರ ನಡುವೆ ವಿಮಾನ ಹಾರಾಟ ರದ್ದು; ದೆಹಲಿಯಲ್ಲೇ ಉಳಿದುಬಿಟ್ಟ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jan 30, 2023 | 11:43 AM

ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ದೆಹಲಿಯಿಂದ ಶ್ರೀನgರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ ಇಂದು ಶ್ರೀನಗರದಲ್ಲಿ (Srinagar) ನಡೆಯಲಿದ್ದು ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಾಗೂ ಎಮ್ ಬಿ ಪಾಟೀಲ, ಐವಾನ್ ಡಿಸೋಜ ಮತ್ತು ಇನ್ನಿತರು ಅದರಲ್ಲಿ ಭಾಗವಹಿಸುವುದು ಸಾಧ್ಯವಾಗುತ್ತಿಲ್ಲ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ದೆಹಲಿಯಿಂದ ಶ್ರೀನgರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಹಾಗಾಗಿ, ಭಾನುವಾರ ರಾತ್ರಿ ದೆಹಲಿ ತಲುಪಿದ್ದ ಸಿದ್ದರಾಮಯ್ಯ ವಿಮಾನ ನಿಲ್ದಾಣದಲ್ಲೇ ಉಳಿಯುವಂತಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 30, 2023 11:42 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.