AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಆರ್ಭಟಕ್ಕೆ ಮಂಗಳೂರಿನಲ್ಲಿ ಪ್ರವಾಹ, ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ

ಮಳೆ ಆರ್ಭಟಕ್ಕೆ ಮಂಗಳೂರಿನಲ್ಲಿ ಪ್ರವಾಹ, ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 30, 2025 | 10:59 AM

Share

Mangalore rain havoc: ಮಂಗಳೂರು ಮಳೆ ವಿಡಿಯೋ, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಉಳ್ಳಾಲದ ಅನೇಕ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿ ಮನೆಗಳು ಜಲಾವೃತಗೊಂಡಿವೆ. ವಾಹನಗಳಿಗೆ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಹಾಗೂ ಸ್ಥಳಾಂತರ ಕಾರ್ಯ ನಡೆಯುತ್ತಿದೆ. ವಿಡಿಯೋ ಇಲ್ಲಿದೆ.

ಮಂಗಳೂರು, ಮೇ 30: ಮಂಗಳೂರಿನಲ್ಲಿ ಹಾಗೂ ಉಳ್ಳಾಲ ಪರಿಸರದಲ್ಲಿ ಗುರುವಾರ ತಡರಾತ್ರಿಯಿಂದಲೂ ಧಾರಕಾರ ಮಳೆಯಾಗುತ್ತಿದೆ. ಉಳ್ಳಾಲ, ಕಲ್ಲಾಪು, ಬಗಂಬಿಲ, ಪಿಲಾ‌ರ್, ಅಂಬಿಕಾರಸ್ತೆ, ಕೋಟೆಕಾರು, ತಲಪಾಡಿ, ಪಾವೂರು, ಹರೇಕಳ, ಉಳಿಯ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಮನೆಗಳು, ಕಾರುಗಳು, ಬೈಕ್​ಗಳು ಎಲ್ಲವೂ ಮುಳುಗಡೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ: ಮಂಗಳೂರು: ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು, ಅವಶೇಷಗಳಡಿ ಸಿಲುಕಿದ ಐವರ ರಕ್ಷಣೆಗೆ ಕಾರ್ಯಾಚರಣೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More