PM Narendra Modi’s Visit to Davanagere: ಪ್ರಧಾನಿಯವರ ಕಾರ್ಯಕ್ರಮಕ್ಕೆ ಎಲ್ಲ ಊಟ-ತಿಂಡಿಯ ವ್ಯವಸ್ಥೆ ಭರದಿಂದ ನಡೆಯುತ್ತಿದೆ!
ಮಧ್ಯಾಹ್ನದ ಹೊತ್ತಿಗೆ ಕಾರ್ಯಕ್ರಮಕ್ಕೆ ಆಗಮಿಸುವವರ ಸಂಖ್ಯೆ 5-6 ಲಕ್ಷಗಳಿಗೆ ಏರುವ ನಿರೀಕ್ಷೆಯಿದೆ. ಮಧ್ಯಾಹ್ನದ ಊಟಕ್ಕೆ ಗೋಧಿ ಪಾಯಸ, ಪುಲಾವ್ ಮತ್ತು ಮೊಸರನ್ನ ತಯಾರಿಸಲಾಗುತ್ತಿದ್ದು ನಗರದೆಲ್ಲೆಡೆ ಪೊಲೀಸರ ಸರ್ಪಗಾವಲು ನಿಯೋಜಿಸಲಾಗಿದೆ.
ದಾವಣಗೆರೆ: ಇಂದು ಮಧ್ಯಾಹ್ನ ನಗರಕ್ಕೆ ಆಗಮಿಸಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಲಕ್ಷಾಂತರ ಜನಕ್ಕೆ ಅಡುಗೆ ತಯಾರಿಸಿ ಬಡಿಸುವ ಗುತ್ತಿಗೆಯನ್ನು ಬೆಂಗಳೂರಿನ ಕೇಶವ್ ಅಂಡ್ ಸನ್ಸ್ (Keshav & Sons) ಕೇಟರಿಂಗ್ ಸಂಸ್ಥೆಗೆ ನೀಡಲಾಗಿದೆ. ದಾವಣಗೆರೆ ಟಿವಿ9 ಪ್ರತಿನಿಧಿ ಕೇಟರಿಂಗ್ ವಿಭಾಗದ ಮುಖ್ಯಸ್ಥರೊಂದಿಗೆ ಮಾತಾಡಿದ್ದಾರೆ. ಬೆಳಗಿನ ಉಪಹಾರಕ್ಕಾಗಿ, ಸುಮಾರು 25,000 ಜನಕ್ಕೆ ಉಪ್ಪಿಟ್ಟನ್ನು (uppit) ತಯಾರಿಸಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಕಾರ್ಯಕ್ರಮಕ್ಕೆ ಆಗಮಿಸುವವರ ಸಂಖ್ಯೆ 5-6 ಲಕ್ಷಗಳಿಗೆ ಏರುವ ನಿರೀಕ್ಷೆಯಿದೆ. ಮಧ್ಯಾಹ್ನದ ಊಟಕ್ಕೆ ಗೋಧಿ ಪಾಯಸ, ಪುಲಾವ್ ಮತ್ತು ಮೊಸರನ್ನ ತಯಾರಿಸಲಾಗುತ್ತಿದ್ದು ನಗರದೆಲ್ಲೆಡೆ ಪೊಲೀಸರ ಸರ್ಪಗಾವಲು ನಿಯೋಜಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ

