AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi’s Visit to Davanagere: ಪ್ರಧಾನಿಯವರ ಕಾರ್ಯಕ್ರಮಕ್ಕೆ ಎಲ್ಲ ಊಟ-ತಿಂಡಿಯ ವ್ಯವಸ್ಥೆ ಭರದಿಂದ ನಡೆಯುತ್ತಿದೆ!

PM Narendra Modi’s Visit to Davanagere: ಪ್ರಧಾನಿಯವರ ಕಾರ್ಯಕ್ರಮಕ್ಕೆ ಎಲ್ಲ ಊಟ-ತಿಂಡಿಯ ವ್ಯವಸ್ಥೆ ಭರದಿಂದ ನಡೆಯುತ್ತಿದೆ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 25, 2023 | 10:45 AM

Share

ಮಧ್ಯಾಹ್ನದ ಹೊತ್ತಿಗೆ ಕಾರ್ಯಕ್ರಮಕ್ಕೆ ಆಗಮಿಸುವವರ ಸಂಖ್ಯೆ 5-6 ಲಕ್ಷಗಳಿಗೆ ಏರುವ ನಿರೀಕ್ಷೆಯಿದೆ. ಮಧ್ಯಾಹ್ನದ ಊಟಕ್ಕೆ ಗೋಧಿ ಪಾಯಸ, ಪುಲಾವ್ ಮತ್ತು ಮೊಸರನ್ನ ತಯಾರಿಸಲಾಗುತ್ತಿದ್ದು ನಗರದೆಲ್ಲೆಡೆ ಪೊಲೀಸರ ಸರ್ಪಗಾವಲು ನಿಯೋಜಿಸಲಾಗಿದೆ.

ದಾವಣಗೆರೆ:  ಇಂದು ಮಧ್ಯಾಹ್ನ ನಗರಕ್ಕೆ ಆಗಮಿಸಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಲಕ್ಷಾಂತರ ಜನಕ್ಕೆ ಅಡುಗೆ ತಯಾರಿಸಿ ಬಡಿಸುವ ಗುತ್ತಿಗೆಯನ್ನು ಬೆಂಗಳೂರಿನ ಕೇಶವ್ ಅಂಡ್ ಸನ್ಸ್ (Keshav & Sons) ಕೇಟರಿಂಗ್ ಸಂಸ್ಥೆಗೆ ನೀಡಲಾಗಿದೆ. ದಾವಣಗೆರೆ ಟಿವಿ9 ಪ್ರತಿನಿಧಿ ಕೇಟರಿಂಗ್ ವಿಭಾಗದ ಮುಖ್ಯಸ್ಥರೊಂದಿಗೆ ಮಾತಾಡಿದ್ದಾರೆ. ಬೆಳಗಿನ ಉಪಹಾರಕ್ಕಾಗಿ, ಸುಮಾರು 25,000 ಜನಕ್ಕೆ ಉಪ್ಪಿಟ್ಟನ್ನು (uppit) ತಯಾರಿಸಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಕಾರ್ಯಕ್ರಮಕ್ಕೆ ಆಗಮಿಸುವವರ ಸಂಖ್ಯೆ 5-6 ಲಕ್ಷಗಳಿಗೆ ಏರುವ ನಿರೀಕ್ಷೆಯಿದೆ. ಮಧ್ಯಾಹ್ನದ ಊಟಕ್ಕೆ ಗೋಧಿ ಪಾಯಸ, ಪುಲಾವ್ ಮತ್ತು ಮೊಸರನ್ನ ತಯಾರಿಸಲಾಗುತ್ತಿದ್ದು ನಗರದೆಲ್ಲೆಡೆ ಪೊಲೀಸರ ಸರ್ಪಗಾವಲು ನಿಯೋಜಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.