Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯೊಬ್ಬರ ಮಗಳು ಚಿನ್ನದ ಸ್ಮಗ್ಲಿಂಗ್​ನಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿದೆ: ವಿಜಯೇಂದ್ರ

ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯೊಬ್ಬರ ಮಗಳು ಚಿನ್ನದ ಸ್ಮಗ್ಲಿಂಗ್​ನಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿದೆ: ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 10, 2025 | 5:16 PM

ರನ್ಯಾ ರಾವ್ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದೆ ಮತ್ತು ಇದರಲ್ಲಿ ಶಾಮೀಲಾಗಿರುವ ಇಬ್ಬರು ಸಚಿವರ ಹೆಸರುಗಳನ್ನೂ ಬಯಲಿಗೆಳೆಯುತ್ತದೆ, ಆದರೆ ಮುಖ್ಯಮಂತ್ರಿಯವರಿಗೆ ಆ ಸಚಿವರು ಯಾರು ಅನ್ನೋದರ ಮಾಹಿತಿ ಲಭ್ಯವಾಗಿರುತ್ತದೆ, ಹಾಗಾಗಿ ತನಿಖಾ ಸಂಸ್ಥೆ ಸಚಿವರ ಹೆರುಗಳನ್ನು ಬಹಿರಂಗಪಡಿಸುವ ಮೊದಲು ಸಿಎಂ ಅವರೇ ಅದನ್ನು ಮಾಡಲಿ ಎನ್ನುವುದಷ್ಟೇ ತನ್ನ ಆಗ್ರಹ ಎಂದು ವಿಜಯೇಂದ್ರ ಹೇಳಿದರು.

ಬೆಂಗಳೂರು, ಮಾರ್ಚ್​ 10: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸದನದ ಹೊರಗೆ ಮತ್ತು ಒಳಗೆ-ಎರಡೂ ಕಡೆ ಸದ್ದು ಮಾಡುತ್ತಿದೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಬಿವೈ ವಿಜಯೇಂದ್ರ (BY Vijayendra) ಪ್ರಕರಣದಲ್ಲಿ ಹಿಂದೇನಾಗಿತ್ತು ಅನ್ನೋದನ್ನು ಸಿಬಿಯ ತನಿಖೆ ಮಾಡಲಿ, ಆದರೆ ಪ್ರಸ್ತುತ ಸ್ಥಿತಿಯ ಬಗ್ಗೆ ತಾನು ಯೋಚನೆ ಮಾಡುತ್ತಿದ್ದೇನೆ, ಹಿರಿಯ ಪೊಲೀಸ್ ಅಧಿಕಾರಿಯ ಮಗಳೊಬ್ಬಳು ಸುಮಾರು ₹14 ಕೋಟಿ ಮೌಲ್ಯದ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದು ಇದೇ ಮೊದಲ ಸಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಕರ್ನಾಟಕದ ಪ್ರಭಾವಿ ರಾಜಕಾರಣಿ ಹೆಸರು: ಯಾರವರು?