ಲೋಕಕಲ್ಯಾಣಕ್ಕಾಗಿ ಬೆಂಗಳೂರಿನಿಂದ ತಿರುಪತಿಗೆ ಸತತ 13ನೇ ವರ್ಷ ಪಾದಯಾತ್ರೆ ಹೊರಟ ಭಕ್ತರ ತಂಡ

Edited By: ಸಾಧು ಶ್ರೀನಾಥ್​

Updated on: Jan 31, 2024 | 6:03 PM

ಲೋಕ ಕಲ್ಯಾಣದ ನಿಮಿತ್ತ ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿ ಅಂತ 30 ಕ್ಕೂ ಅಧಿಕ ಭಕ್ತರು ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಚಲ್ಲಹಳ್ಳಿ ಗ್ರಾಮದಿಂದ 30ಕ್ಕೂ ಅಧಿಕ ಭಕ್ತರು 6 ದಿನಗಳ ತಿರುಮಲ ತಿರುಪತಿ ಪಾದಯಾತ್ರೆ ಹೊರಟಿದ್ದು ಪಾದಯಾತ್ರಿಗಳಿಗೆ ಗ್ರಾಮಸ್ಥರು ಬೀಳ್ಕೊಡುಗೆ ಕೊಟ್ಟಿದ್ದಾರೆ.

ಲೋಕ ಕಲ್ಯಾಣದ ನಿಮಿತ್ತ ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿ ಅಂತ 30 ಕ್ಕೂ ಅಧಿಕ ಭಕ್ತರು ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಚಲ್ಲಹಳ್ಳಿ ಗ್ರಾಮದಿಂದ 30ಕ್ಕೂ ಅಧಿಕ ಭಕ್ತರು 6 ದಿನಗಳ ತಿರುಮಲ ತಿರುಪತಿ ಪಾದಯಾತ್ರೆ ಹೊರಟಿದ್ದು ಪಾದಯಾತ್ರಿಗಳಿಗೆ ಗ್ರಾಮಸ್ಥರು ಬೀಳ್ಕೊಡುಗೆ ಕೊಟ್ಟಿದ್ದಾರೆ.

ಕಳೆದ 12 ವರ್ಷಗಳಿಂದ ಪ್ರತಿ ವರ್ಷ ಈ ಗ್ರಾಮಸ್ಥರು ಪಾದಯಾತ್ರೆ ಮಾಡ್ತಿದ್ದು 13ನೇ ವರ್ಷವು ಯಾತ್ರೆಯನ್ನ ಮುಂದುವರೆಸಿದ್ದಾರೆ. ಜೊತೆಗೆ ಈ ಬಾರಿ ರಾಜ್ಯದಲ್ಲಿ ಸಮರ್ಪಕ ಮಳೆ ಬೆಳೆಯಿಲ್ಲದೆ ರೈತರು ಕಂಗಾಲಾಗಿದ್ದು ಮುಂದಿನ ದಿನಗಳಲ್ಲಿಯಾದರೂ ಉತ್ತಮ ಮಳೆ ಬೆಳೆಯಾಗಲಿ ಅಂತ ಗ್ರಾಮಸ್ಥರು ಲೋಕ ಕಲ್ಯಾಣದ ಹರಕೆ ಹೊತ್ತು ಪಾದಯಾತ್ರೆಗೆ ತೆರಳಿದ್ದಾರೆ. ಇನ್ನೂ ಆರು ದಿನಗಳ ಕಾಲ ಕಾಲ್ನಡಿಗೆಯಲ್ಲೆ 30 ಜನ ಭಕ್ತರು ಭಜನೆ ಮೂಲಕ ತಿರುಪತಿಗೆ ತೆರಳಲಿದ್ದು 7ನೇ ದಿನ ಶ್ರೀನಿವಾಸನ ದರ್ಶನ ಮಾಡಿ ವಾಪಸ್ ಮರಳಲಿದ್ದಾರೆ ಎಂದು ಪಾದಯಾತ್ರಿ ಚೇತನ್ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More