ರಾಕ್ಲೈನ್ ವೆಂಕಟೇಶ್ ಮನೆ ಪರಿಶೋಧಿಸಿದ ಅಧಿಕಾರಿಗಳು ಹೇಳಿದ್ದು ಹೀಗೆ
Tiger Claw: ಹುಲಿ ಉಗುರು ದೊಡ್ಡ ಸಂಚಲನವನ್ನೇ ಎಬ್ಬಿಸಿದೆ. ನಟರಾದ ದರ್ಶನ್, ಜಗ್ಗೇಶ್, ರಾಕ್ಲೈನ್ ವೆಂಕಟೇಶ್, ನಿಖಿಲ್ ಕುಮಾರಸ್ವಾಮಿ ಅವರುಗಳ ಮನೆಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ರಾಕ್ಲೈನ್ ವೆಂಕಟೇಶ್ ಮನೆಯಲ್ಲಿ ಶೋಧ ನಡೆಸಿದ ಬಳಿಕ ಅಧಿಕಾರಿಗಳು ಹೀಗೆ ಹೇಳಿದರು.
ಬಿಗ್ಬಾಸ್ (Bigg Boss) ಸ್ಪರ್ಧಿ ವರ್ತೂರು ಸಂತೋಶ್ ಹುಲಿ ಉಗುರು ಧರಿಸಿದ್ದ ಕಾರಣ ಅವರನ್ನು ಬಂಧಿಸಿದ ಬಳಿಕ ಆ ವಿವಾದ ದೊಡ್ಡ ಸಂಚಲನ ಎಬ್ಬಿಸಿದೆ. ನಟ ಜಗ್ಗೇಶ್, ದರ್ಶನ್, ರಾಕ್ಲೈನ್ ವೆಂಕಟೇಶ್, ನಿಖಿಲ್ ಕುಮಾರಸ್ವಾಮಿ, ಕೆಲವು ಸ್ವಾಮೀಜಿಗಳು ಸಹ ಹುಲಿ ಉಗುರು ಧರಿಸಿದ್ದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆ ಬಗ್ಗೆಯೂ ತನಿಖೆಗೆ ಒತ್ತಾಯಿಸಲಾಗಿತ್ತು. ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹಲವು ಸೆಲೆಬ್ರಿಟಿಗಳಿಗೆ ನೊಟೀಸ್ ನೀಡಿ ಶೋಧ ಕಾರ್ಯ ನಡೆಸಿದ್ದಾರೆ. ರಾಕ್ಲೈನ್ ವೆಂಕಟೇಶ್ ಮನೆಯ ಮೇಲೆಯೂ ದಾಳಿ ನಡೆಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಮನೆಯಲ್ಲಿ ಯಾವುದೇ ಹುಲಿ ಉಗುರು ಪತ್ತೆಯಾಗಿಲ್ಲ, ರಾಕ್ಲೈನ್ ಅವರು ವಿದೇಶ ಪ್ರವಾಸದಲ್ಲಿದ್ದು ಅವರು ಬಂದ ಬಳಿಕ ವಿಚಾರಣೆ ಮುಂದುವರೆಸುತ್ತೇವೆ ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

