ನೀರಿಗಾಗಿ ಅಲೆದು ನಿತ್ರಾಣಗೊಂಡ ಮರಿ ಆನೆ: ನೀರು ಕುಡಿಸಿ ಉಪಚರಿಸಿದ ಅರಣ್ಯ ಸಿಬ್ಬಂದಿ

Edited By:

Updated on: Apr 05, 2024 | 8:39 PM

ನೀರಿಗಾಗಿ ಅಲೆದು ಮರಿ ಆನೆಯೊಂದು ನಿತ್ರಾಣಗೊಂಡಿರುವಂತಹ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೊರವಲಯದಲ್ಲಿ ಕಂಡುಬಂದಿದೆ. ನೀರು ಅರೆಸಿ ಊರಿನ ಕಡೆ ಬರುವಾಗ ನಿತ್ರಾಣಗೊಂಡು ಆನೆ ಮರಿ ಬಿದ್ದಿದೆ. ನಿತ್ರಾಣಗೊಂಡ ಆನೆ ಮರಿಯನ್ನು ಗಮನಿಸಿದ ಅರಣ್ಯ ಸಿಬ್ಬಂದಿಗಳು ನೀರು ಕುಡಿಸಿ ಉಪಚರಿಸಿದ್ದಾರೆ.

ರಾಮನಗರ, ಏಪ್ರಿಲ್​ 05: ರಾಜ್ಯದಲ್ಲಿ ಬರ ಮತ್ತು ಬಿರು ಬಿಸಿಲು ಒಟ್ಟೊಟ್ಟಿಗೆ ಎದುರಾಗಿದ್ದು, ಜನರಿಗೆ ಸಾಕು ಸಾಕಾಗಿ ಹೋಗಿದೆ. ಮನುಷ್ಯರ ಪರಿಸ್ಥಿತಿಯೇ ಹೀಗಿರುವಾಗ ಇನ್ನು ಪ್ರಾಣಿ ಸಂಕುಲ ಹೇಳ ತೀರದು. ಬಿರು ಬಿಸಿಲಿಗೆ ಕಾಡಿನೊಳಗಿನ ಕೆರೆ, ಕಟ್ಟೆಗಳು ಬತ್ತಿ ಹೋಗಿವೆ. ಅರಣ್ಯ ಪ್ರದೇಶಗಳಲ್ಲಿ ಪ್ರಾಣಿಗಳಿಗೂ ನೀರಿಗೆ ಹಾಹಾಕಾರ ಶುರುವಾಗಿದೆ. ಹೀಗಾಗಿ ನೀರಿಗಾಗಿ ಅಲೆದು ಮರಿ ಆನೆ (elephant) ಯೊಂದು ನಿತ್ರಾಣಗೊಂಡಿರುವಂತಹ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೊರವಲಯದಲ್ಲಿ ಕಂಡುಬಂದಿದೆ. ನೀರು ಅರೆಸಿ ಊರಿನ ಕಡೆ ಬರುವಾಗ ನಿತ್ರಾಣಗೊಂಡು ಆನೆ ಮರಿ ಬಿದ್ದಿದೆ. ನಿತ್ರಾಣಗೊಂಡ ಆನೆ ಮರಿಯನ್ನು ಗಮನಿಸಿದ ಅರಣ್ಯ ಸಿಬ್ಬಂದಿಗಳು ನೀರು ಕುಡಿಸಿ ಉಪಚರಿಸಿದ್ದಾರೆ. ನೀರು ಕುಡಿದ ಬಳಿಕ‌ ನಿಧಾನವಾಗಿ ಕಾಡೆನೆಡೆ ಮರಿ ಆನೆ ತೆರಳಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More