ಪ್ರತಾಪ್ ಸಿಂಹನ ತಮ್ಮ ಅಪರಾಧವೆಸಗಿದ್ದು ನಿಜವಾಗಿರುವುದರಿಂದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ: ಕೆಎಂ ಶಿವಲಿಂಗೇಗೌಡ, ಶಾಸಕ

ಕೊಡಗು-ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹನ ಜನಪ್ರಿಯತೆ, ವರ್ಚಸ್ಸು ಎಷ್ಟಿದೆ ಅಂತ ವಿಧಾನ ಸಭಾ ಚುನಾವಣೆಯಲ್ಲಿ ಬಯಲಾಗಿದೆ. ಬಿಜೆಪಿಯ ಭದ್ರಕೋಟೆಯಾಗಿದ್ದ ಕೊಡಗಿನ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ತನ್ನ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸದಂತೆ ತಡೆಯಲು ಪ್ರತಾಪ್ ಅವರನ್ನು ಯಾರಾದರೂ ಕಟ್ಟಿಹಾಕಿದ್ದರೆ? ಎಂದು ಶಿವಲಿಂಗೇಗೌಡ ಪ್ರಶ್ನಿಸಿದರು.

ಪ್ರತಾಪ್ ಸಿಂಹನ ತಮ್ಮ ಅಪರಾಧವೆಸಗಿದ್ದು ನಿಜವಾಗಿರುವುದರಿಂದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ: ಕೆಎಂ ಶಿವಲಿಂಗೇಗೌಡ, ಶಾಸಕ
|

Updated on: Jan 01, 2024 | 6:08 PM

ಹಾಸನ: ಅರಸೀಕೆರೆ ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡರ (KM Shivalinge Gowda) ಮಾತು ಕಡ್ಡಿ ಮುರಿದಂತೆ, ಖಡಾಮುಡಿ. ಸಂಸದ ಪ್ರತಾಪ್ ಸಿಂಹ (Pratap Simha) ತಮ್ಮ ವಿಕ್ರಮ ಸಿಂಹ (Vikram Simha) ಬೇಲೂರು ಬಳಿಯ 3-ಎಕರೆ ಅರಣ್ಯಪ್ರದೇಶದಲ್ಲಿ ಮರಗಳನ್ನು ಕಡಿಸಿರೋದು ಸತ್ಯ, ಅದೇ ಕಾರಣಕ್ಕೆ ಅರಣ್ಯಾಧಿಕಾರಿಗಳು ವಿಕ್ರಮನನ್ನು ಬಂಧಿಸಿ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ, ಅವನು ನಿರಪರಾಧಿಯಾಗಿದ್ದರೆ ಅದನ್ನು ಸಾಬೀತು ಮಾಡಲಿ, ಅವನು ಮರ ಕಡಿಸಿದ್ದು ಖಚಿತವಾದ ಬಳಿಕವೇ ಬಂಧಿಸಲಾಗಿದೆ, ವಿನಾಕಾರಣ ಬಂಧಿಸಲು ಅಧಿಕಾರಿಗಳಿಗೇನು ಹುಚ್ಚೇ? ಎಂದು ಗೌಡರು ಹೇಳಿದರು. ವಿಕ್ರಮ ವಿರುದ್ಧವಾಗಲೀ, ಅವನಣ್ಣನ ವಿರುದ್ಧವಾಗಲೀ ಸಿದ್ದರಾಮಯ್ಯನವರಿಗೆ ರಾಜಕೀಯ ವೈಷಮ್ಯ ಯಾಕೆ ಇದ್ದೀತು? ಲೋಕ ಸಭಾ ಚುನಾವಣೆಯಲ್ಲಿ ಅವರು ತಮ್ಮ ಮಗನನ್ನು ಮೈಸೂರು ಕ್ಷೇತ್ರದಿಂದ ಕಣಕ್ಕಿಳಿಸಬೇಕಾದರೆ ಪ್ರತಾಪ ಸಿಂಹನ ಪರವಾನಗಿ ಪಡೆಯಬೇಕೇ? ಕಾಂಗ್ರೆಸ್ ಹೈಕಮಾಂಡ್ ಒಪ್ಪಿದರೆ ಅವರು ಖಂಡಿತ ಯತೀಂದ್ರನನ್ನು ಸ್ಪರ್ಧೆಗಿಳಿಸುತ್ತಾರೆ ಎಂದ ಶಿವಲಿಂಗೇಗೌಡರು, ವಿಕ್ರಮ ಸಿಂಹ ಮರ ಕಡಿದಿದ್ದು ಬೇಲೂರುನಲ್ಲಿ, ಅದು ಹಾಸನ ಲೋಕ ಸಭಾ ಕ್ಷೇತ್ರದಲ್ಲಿ ಬರುತ್ತದೆ, ಹಾಗಾಗಿ ಪ್ರತಾಪ್ ಸಿಂಹ ಮಾಡುತ್ತಿರುವ ಅರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​