ಶಿವನಸಮುದ್ರದ ಕಾಲುವೆಯಲ್ಲಿ ಬಿದ್ದಿದ್ದ ಕಾಡಾನೆ ಮೇಲೆ ಬಂದಿದ್ದು ಹೇಗೆ ಗೊತ್ತಾ?
ಕಾಡಾನೆ ಆಹಾರ ಅರಸಿ ಬಂದು ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವವಸಮುದ್ರ ಬಳಿಯ ನಾಲೆಗೆ ಬಿದ್ದಿದೆ. ಖಾಸಗಿ ಪವರ್ ಸ್ಟೇಷನ್ಗೆ ನೀರು ಸರಬರಾಜು ಮಾಡುವ ನಾಲೆಯಲ್ಲೇ 3 ದಿನದಿಂದ ಸಿಲುಕಿತ್ತು. ಸ್ಥಳದಲ್ಲೇ ಬೀಡುಬಿಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಕಾಡಾನೆಗೆ ಆಹಾರ ನೀಡಿದ್ದರು. 2 ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಕಾಡಾನೆ ಪ್ರಜ್ಞೆತಪ್ಪಿ ನಾಲೆಯಲ್ಲೇ ಕುಸಿದುಬಿದ್ದಿದೆ. ಬಳಿಕ ಸಿಬ್ಬಂದಿ ನಾಲೆಗೆ ಇಳಿದು ಕಾಡಾನೆಯ ಕಾಲುಗಳಿಗೆ ಬೆಲ್ಟ್ ಕಟ್ಟಿ ಕಬ್ಬಿಣದ ಮ್ಯಾಟ್ ಮೇಲೆ ಮಲಗಿಸಿ ಕ್ರೇನ್ ಮೂಲಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ.
ಮಂಡ್ಯ, ನವೆಂಬರ್ 19: ಮಂಡ್ಯ ಜಿಲ್ಲೆಯ ಶಿವನಸಮುದ್ರದ ಬಳಿಯ ಕಾಲುವೆಯಲ್ಲಿ ಕಾಡಾನೆ ಮರಿಯೊಂದು ಬಿದ್ದಿತ್ತು. 3 ದಿನವಾದರೂ ಆ ಆನೆಗೆ (Elephant) ಮೇಲೆ ಬರಲು ಸಾಧ್ಯವಾಗದೆ ಅಲ್ಲೇ ಸಿಲುಕಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿ ಆ ಆನೆಮರಿಯನ್ನು ಸುರಕ್ಷಿತವಾಗಿ ಹೊರಗೆ ತಂದು, ಅರಣ್ಯಕ್ಕೆ ಬಿಟ್ಟಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದ ಕಾಡಾನೆಗೆ ಚಿಕಿತ್ಸೆ ನೀಡಿ ಅರಣ್ಯಕ್ಕೆ ಬಿಡಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್ಗಳಿಗೆ ಮುಗಿಬಿದ್ದ ಜನ

