ಶಿವನಸಮುದ್ರದ ಕಾಲುವೆಯಲ್ಲಿ ಬಿದ್ದಿದ್ದ ಕಾಡಾನೆ ಮೇಲೆ ಬಂದಿದ್ದು ಹೇಗೆ ಗೊತ್ತಾ?

Updated on: Nov 19, 2025 | 10:53 PM

ಕಾಡಾನೆ ಆಹಾರ ಅರಸಿ ಬಂದು ಜಿಲ್ಲೆಯ ಮಳವಳ್ಳಿ ತಾಲೂಕಿನ‌ ಶಿವವಸಮುದ್ರ ಬಳಿಯ ನಾಲೆಗೆ ಬಿದ್ದಿದೆ. ಖಾಸಗಿ ಪವರ್ ಸ್ಟೇಷನ್​ಗೆ ನೀರು ಸರಬರಾಜು ಮಾಡುವ ನಾಲೆಯಲ್ಲೇ 3 ದಿನದಿಂದ ಸಿಲುಕಿತ್ತು. ಸ್ಥಳದಲ್ಲೇ ಬೀಡುಬಿಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಕಾಡಾನೆಗೆ ಆಹಾರ ನೀಡಿದ್ದರು. 2 ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಕಾಡಾನೆ ಪ್ರಜ್ಞೆತಪ್ಪಿ ನಾಲೆಯಲ್ಲೇ ಕುಸಿದುಬಿದ್ದಿದೆ. ಬಳಿಕ ಸಿಬ್ಬಂದಿ ನಾಲೆಗೆ ಇಳಿದು ಕಾಡಾನೆಯ ಕಾಲುಗಳಿಗೆ ಬೆಲ್ಟ್ ಕಟ್ಟಿ ಕಬ್ಬಿಣದ ಮ್ಯಾಟ್ ಮೇಲೆ ಮಲಗಿಸಿ ಕ್ರೇನ್ ಮೂಲಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ.

ಮಂಡ್ಯ, ನವೆಂಬರ್​​ 19: ಮಂಡ್ಯ ಜಿಲ್ಲೆಯ ಶಿವನಸಮುದ್ರದ ಬಳಿಯ ಕಾಲುವೆಯಲ್ಲಿ ಕಾಡಾನೆ ಮರಿಯೊಂದು ಬಿದ್ದಿತ್ತು. 3 ದಿನವಾದರೂ ಆ ಆನೆಗೆ (Elephant) ಮೇಲೆ ಬರಲು ಸಾಧ್ಯವಾಗದೆ ಅಲ್ಲೇ ಸಿಲುಕಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿ ಆ ಆನೆಮರಿಯನ್ನು ಸುರಕ್ಷಿತವಾಗಿ ಹೊರಗೆ ತಂದು, ಅರಣ್ಯಕ್ಕೆ ಬಿಟ್ಟಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದ ಕಾಡಾನೆಗೆ ಚಿಕಿತ್ಸೆ ನೀಡಿ ಅರಣ್ಯಕ್ಕೆ ಬಿಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More