ಏನ್​ ಅಣ್ಣಾಮಲೈ ದೊಡ್ಡ ಹೀರೋನಾ: ಬೆಂಗಳೂರಿನಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಫುಲ್​ ಚಾರ್ಜ್​​!

| Updated By: ಸಾಧು ಶ್ರೀನಾಥ್​

Updated on: Jun 29, 2023 | 2:41 PM

MP Renukacharya: ಏನ್​ ಅಣ್ಣಾಮಲೈ ದೊಡ್ಡ ಹೀರೋನಾ: ಬೆಂಗಳೂರಿನಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಫುಲ್​ ಚಾರ್ಜ್​​!

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಸೋಲಿನ ಬಳಿಕ ಬಿಜೆಪಿಯಲ್ಲಿ(BJP) ಅಂತರ್​ಯುದ್ಧ ಶುರುವಾಗಿದೆ. ಬಹಿರಂಗವಾಗಿಯೇ ಬಿಜೆಪಿ ನಾಯಕರು ಪರಸ್ಪರ ಬೈದಾಡಿಕೊಳ್ಳುತ್ತಿದ್ದಾರೆ. ಅದರಂತೆ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಮತ್ತೊಂದೆಜ್ಜೆ ಮುಂದೆ ಹೋಗಿ ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ. ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯಾಗಿದ್ದ ಅಣ್ಣಾಮಲೈ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್​ ಸೇರಿದಂತೆ ಕೆಲ ನಾಯಕರ ಕಾರ್ಯವೈಖರಿ ಬಿಚ್ಚಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us on