ಪೆನ್​ಡ್ರೈವ್​ ಅನ್ನು ಹೆಚ್ ಡಿ ಕುಮಾರಸ್ವಾಮಿ ಮರೆತರೂ ಮಾಧ್ಯಮದವರು ಮರೆಯಲಾರರು, ಕೇಳಿದಾಗ ತಲೆ ಚಚ್ಚಿಕೊಳ್ಳಬೇಕಾಯಿತು!

ಅರುಣ್​ ಕುಮಾರ್​ ಬೆಳ್ಳಿ

Updated on: Aug 04, 2023 | 11:20 AM

ಕಾಂಗ್ರೆಸ್ ಪರ ತೀರ್ಪು ನೀಡಿದ ಜನತೆಗೆ ಮುಂದೆ ಇನ್ನಷ್ಟು ಆಘಾತಗಳು ಕಾದಿವೆ, ಅವರಿಗೆ ತಮ್ಮ ತಪ್ಪಿನ ಅರಿವಾಗಬೇಕು, ಸೂಕ್ತ ಸಮಯದಲ್ಲಿ ಪೆನ್​ಡ್ರೈವ್ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರು: ಹೆಚ್ ಡಿ ಕುಮಾರಸ್ವಾಮಿಯವರ (HD Kumaraswamy) ವರಸೆಯೇ ಹಾಗೆ, ಒಮ್ಮೆ ಮಾತಿಗೆ ನಿಂತರೆ ಹಲವಾರು ವಿಷಯಗಳನ್ನು ಮಾತಾಡುತ್ತಾರೆ. ಕುಟುಂಬದೊಂದಿಗೆ ಯುರೋಪ್ ಪ್ರವಾಸ (Europe Trip) ಮುಗಿಸಿಕೊಂಡು ರಾಜ್ಯ ರಾಜಧಾನಿಗೆ ಹಿಂತಿರುಗಿದ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ಮೂರುವಾರಗಳಿಂದ ಪ್ರೆಸ್ ನಿಂದ ದೂರವಿದ್ದ ಬರವನ್ನು ನೀಗಿಸಿಕೊಂಡರು. ಸುದ್ದಿಗಾರರೊಂದಿಗೆ ಮಾತಾಡುವಾಗ ಅವರು ತಮ್ಮ ಪೆನ್ ಡ್ರೈವ್ (pendrive) ಅಸ್ತ್ರವನ್ನು ಮರೆತಿರುತ್ತಾರೆ ಅಂತ ಭಾವಿಸಿದ್ದರು! ಆದರೆ, ಪತ್ರಕರ್ತರೊಬ್ಬರು ಸರ್ ಎಲ್ಲಿ ಪೆನ್ ಡ್ರೈವ್ ಅಂತ ಕೇಳಿದಾಗ, ‘ಅಯ್ಯೋ ರಾಮ!’ ಅಂತ ಹಣೆ ಚಚ್ಚಿಕೊಂಡರು. ಅದನ್ನು ರಿಲೀಸ್ ಮಾಡುವ ಸಮಯ ಇನ್ನೂ ಬಂದಿಲ್ಲ, ಕಾಂಗ್ರೆಸ್ ಪರ ತೀರ್ಪು ನೀಡಿದ ಜನತೆಗೆ ಮುಂದೆ ಇನ್ನಷ್ಟು ಆಘಾತಗಳು ಕಾದಿವೆ, ಅವರಿಗೆ ತಮ್ಮ ತಪ್ಪಿನ ಅರಿವಾಗಬೇಕು, ಸೂಕ್ತ ಸಮಯದಲ್ಲಿ ಅದನ್ನು ಬಿಡುಗಡೆ ಮಾಡುವುದಾಗಿ ಹೇಳಿ ಮತ್ತೊಮ್ಮೆ ಡಿಫೆನ್ಸಿವ್ ಶಾಟ್ ಆಡಿದರು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.