ಬೆಂಗಳೂರು: ತಿರುಮಲಗಿರಿ ಶ್ರೀಲಕ್ಷ್ಮೀ ವೆಂಟೇಶ್ವರ ದೇವಸ್ಥಾನದಲ್ಲಿ ಹೆಚ್​​ಡಿ ಕುಮಾರಸ್ವಾಮಿ ಪೂಜೆ

| Updated By: ವಿವೇಕ ಬಿರಾದಾರ

Updated on: Sep 09, 2023 | 8:44 AM

ನಮ್ಮ ಕುಟುಂಬದಲ್ಲಿನ ಇತ್ತೀಚಿನ ಬೆಳವಣಿಗೆ, ಆರೋಗ್ಯ ವೃದ್ಧಿಗೆ ಪೂಜೆ ಮಾಡಿಸಿದ್ದೇನೆ. ಹಿಂದೂ ಧರ್ಮದ ಸಂಪ್ರದಾಯದಂತೆ ಪೂಜೆ ನೆರವೇರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರು: ತಿರುಮಲಗಿರಿ ಶ್ರೀಲಕ್ಷ್ಮೀ ವೆಂಟೇಶ್ವರ ದೇವಸ್ಥಾನದಲ್ಲಿ ಹೆಚ್​​ಡಿ ಕುಮಾರಸ್ವಾಮಿ ಪೂಜೆ
ಹೆಚ್​ಡಿ ಕುಮಾರಸ್ವಾಮಿ ಪೂಜೆ

ಬೆಂಗಳೂರು, ಸೆ.09: ಕೆಲದಿನಗಳ ಹಿಂದೆ ಸ್ಟ್ರೋಕ್​​ ಹೊಡೆದು ನಗರದ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಅವರು ಗುಣಮುಖರಾಗಿ ಬಂದಿದ್ದಾರೆ. ಇದೀಗ ಜೆ.ಪಿ.ನಗರದ ತಿರುಮಲಗಿರಿ ಶ್ರೀಲಕ್ಷ್ಮೀ ವೆಂಟೇಶ್ವರ (Lakshmi Venkateshwara Temple) ದೇವಸ್ಥಾನದಲ್ಲಿ ಮುಂಜಾನೆ ಐದು ಗಂಟೆಗೆ ಹೋಮ, ಹವನ ನೆರವೇರಿಸಿದ್ದಾರೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ತಂದೆಯವರ ಆರೋಗ್ಯ ವೃದ್ಧಿಗಾಗಿ ಪೂಜೆ ಸಲ್ಲಿಸಿದ್ದೇನೆ. ನಮ್ಮ ಕುಟುಂಬದಲ್ಲಿನ ಇತ್ತೀಚಿನ ಬೆಳವಣಿಗೆ, ಆರೋಗ್ಯ ವೃದ್ಧಿಗೆ ಪೂಜೆ ಮಾಡಿಸಿದ್ದೇನೆ. ಹಿಂದೂ ಧರ್ಮದ ಸಂಪ್ರದಾಯದಂತೆ ಪೂಜೆ ನೆರವೇರಿಸಿದ್ದೇನೆ. ಇನ್ನು ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರದ ಬಗ್ಗೆ ಸದ್ಯಕ್ಕೆ ಮಾತಾಡಲ್ಲ. ಮುಂದಿನ ದಿನಗಳಲ್ಲಿ ಮೈತ್ರಿ ವಿಚಾರವಾಗಿ ಮಾತನಾಡುತ್ತೇನೆ. ಬಿಜೆಪಿ ಮೈತ್ರಿ ವಿಚಾರ ಇನ್ನೂ ಸಮಯ ಇದೆ ಎಂದರು.

Follow us on