Davanagere: ರಾಜನಹಳ್ಳಿ ಗುರುಪೀಠ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಸಿದ್ದರಾಮಯ್ಯರಿಂದ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ

|

Updated on: Feb 09, 2023 | 5:49 PM

ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಸಾಹಿತಿ ಡಾ ರಂಗರಾಜ ವನದುರ್ಗೆ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದ ಬಳಿಕ ವಾಲ್ಮೀಕಿ ವಿಜಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ (Rajanahalli) ವಾಲ್ಮೀಕಿ ಗುರುಪೀಠ 5 ನೇ ವರ್ಷದ ಮಹರ್ಷಿ ವಾಲ್ಮೀಕಿ (Maharshi Valmiki) ಜಾತ್ರಾ ಮಹೋತ್ಸವದಲ್ಲಿ ನಡೆದ ಲಿಂಗೈಕ್ಯ ಪುಣ್ಯಾನಂದ ಪುರಿ 15ನೇ ಪುಣ್ಯಾರಾಧನೆ, ಪ್ರಸನ್ನಾನಂದ ಶ್ರೀಗಳ 16ನೇ ವಾರ್ಷಿಕ ಪಟ್ಟಾಧಿಕಾರ ಮಹೋತ್ಸವ ಹಾಗೂ ನೂತನ ವಾಲ್ಮೀಕಿ ರಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗುರುವಾರ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ಸಾಹಿತಿ ಡಾ ರಂಗರಾಜ ವನದುರ್ಗೆ (Dr Rangaraj Vanadurge) ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದ ಬಳಿಕ ವಾಲ್ಮೀಕಿ ವಿಜಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Thu, 9 February 23

Follow us on