AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನೋತ್ಸವದಲ್ಲಿ ಯಡಿಯೂರಪ್ಪ ಭಾವುಕ ಭಾಷಣ: ಸಾರ್ವಜನಿಕ ಸೇವೆಯ ಪಯಣ ಮೆಲುಕು ಹಾಕಿದ ಮಾಜಿ ಸಿಎಂ

ಅಭಿಮಾನೋತ್ಸವದಲ್ಲಿ ಯಡಿಯೂರಪ್ಪ ಭಾವುಕ ಭಾಷಣ: ಸಾರ್ವಜನಿಕ ಸೇವೆಯ ಪಯಣ ಮೆಲುಕು ಹಾಕಿದ ಮಾಜಿ ಸಿಎಂ

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:May 09, 2026 | 7:47 PM

Share

ಚಿತ್ರದುರ್ಗದಲ್ಲಿ ನಡೆದ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ 50 ವರ್ಷಗಳ ಸಾರ್ವಜನಿಕ ಸೇವೆಯ ಪಯಣವನ್ನು ನೆನಪಿಸಿಕೊಂಡು ಕರುನಾಡಿನ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ರೈತರು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ತಮ್ಮ ಕೊಡುಗೆಗಳನ್ನು ಸ್ಮರಿಸಿದ ಅವರು, ಈ ದಿನವು ಒಬ್ಬ ವ್ಯಕ್ತಿಯ ಆಚರಣೆಯಲ್ಲ. ಬದಲಿಗೆ ಐದು ದಶಕಗಳ ಸಹಬಾಳ್ವೆಯ ಆಚರಣೆ ಎಂದು ಬಣ್ಣಿಸಿದರು.

ಚಿತ್ರದುರ್ಗ ಮೇ 09: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ 50 ವರ್ಷಗಳ ಸಾರ್ವಜನಿಕ ಸೇವೆಯ ಪಯಣವನ್ನು ನೆನಪಿಸಿಕೊಂಡು ಕರ್ನಾಟಕದ ಜನತೆಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನವು ಶಿಕಾರಿಪುರದ ಬೀದಿಗಳಿಂದ ವಿಧಾನಸೌಧದ ಹಂತಗಳವರೆಗೂ ಸಾಗಿ ಬಂದಿದೆ. ಕಾರ್ಯಕರ್ತರು ಮತ್ತು ರೈತರ ಆಶೀರ್ವಾದವೇ ನನ್ನ ಶಕ್ತಿಗೆ ಕಾರಣ. ಈ ದಿನವು ಒಬ್ಬ ವ್ಯಕ್ತಿಯ ಆಚರಣೆಯಲ್ಲ, ಬದಲಿಗೆ ಐದು ದಶಕಗಳ ಸಹಬಾಳ್ವೆಯ ಆಚರಣೆ ಎಂದು ಬಣ್ಣಿಸಿದ್ದಾರೆ. ತಮ್ಮ ಕೊನೆಯ ಉಸಿರಿನವರೆಗೂ ದೇಶ, ರಾಜ್ಯ ಮತ್ತು ಪಕ್ಷಕ್ಕಾಗಿ ದುಡಿಯುವ ಸಂಕಲ್ಪ ವ್ಯಕ್ತಪಡಿಸಿ ಭಾವುಕರಾದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 09, 2026 07:46 PM
Follow Us