ಬಿಜೆಪಿ ನಾಯಕ ಬಿ ಶ್ರೀರಾಮುಲು ಒಂದೇದಿನ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯರನ್ನು ಭೇಟಿಯಾಗಿದ್ದು ಯಾಕೆ ಗೊತ್ತಾ?
ಬಂದು ಭೇಟಿಯಾದವರೆಲ್ಲ ಕ್ಷೇತ್ರದ ಕೆಲಸ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚೆ ಮಾಡಲು ಇಲ್ಲವೇ ಅನುದಾನ ಬಿಡುಗಡೆ ಮಾಡುವಂತೆ ಕೇಳಲು ಬಂದಿದ್ದಾಗಿ ಹೇಳುತ್ತಾರೆ. ಆದರೆ ಮಾಜಿ ಮಂತ್ರಿ ಶ್ರೀರಾಮುಲು ಅವರು ತಮ್ಮ ಮಗಳ ಅಮಂತ್ರಣ ಪತ್ರಿಕೆಯನ್ನು ನೀಡಲು ಬಂದಿದ್ದರಂತೆ.
ಬೆಂಗಳೂರು: ಇಂದು ಬೆಳಗ್ಗೆ ನಡೆದ ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಬಿ ಶ್ರೀರಾಮುಲು (B Sriramulu) ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾದರು. ಅಲ್ಲಿಗೆ ಹೋಗುವ ಮೊದಲು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (CM Siddaramaiah) ಸಹ ಭೇಟಿಯಾಗಿದ್ದರು. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಶಿವಕುಮಾರ್ ಅವರನ್ನು ಭೇಟಿಯಾಗುವ ಪ್ರಕ್ರಿಯೆ ಕಳೆದ ಕೆಲ ತಿಂಗಳುಗಳಿಂದ ಜಾರಿಯಲ್ಲಿದೆ. ಈ ಸಂಪ್ರದಾಯವನ್ನು ಶುರುಮಾಡಿದ್ದು ಪ್ರಾಯಶಃ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಇರಬಹುದು. ಬಂದು ಭೇಟಿಯಾದವರೆಲ್ಲ ಕ್ಷೇತ್ರದ ಕೆಲಸ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚೆ ಮಾಡಲು ಇಲ್ಲವೇ ಅನುದಾನ ಬಿಡುಗಡೆ ಮಾಡುವಂತೆ ಕೇಳಲು ಬಂದಿದ್ದಾಗಿ ಹೇಳುತ್ತಾರೆ. ಆದರೆ ಮಾಜಿ ಸಚಿವ ಶ್ರೀರಾಮುಲು ಅವರು ತಮ್ಮ ಮಗಳ ಅಮಂತ್ರಣ ಪತ್ರಿಕೆಯನ್ನು ನೀಡಲು ಬಂದಿದ್ದರಂತೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:03 pm, Mon, 20 November 23
Latest Videos