ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ತಾನೂ ಒಬ್ಬ ಆಕಾಂಕ್ಷಿ ಅಂತ ಖಚಿತಪಡಿಸಿದ ಬಿ ಶ್ರೀರಾಮುಲು

ಅರುಣ್​ ಕುಮಾರ್​ ಬೆಳ್ಳಿ

Updated on: Feb 01, 2025 | 1:38 PM

ಪಕ್ಷದಲ್ಲಿ ಯಾರು ಹೆಚ್ಚು ಶಕ್ತಿವಂತರು ಅಂತ ಚರ್ಚೆ ನಡೆಯುತ್ತಿದೆ, ಆದರೆ ಶಕ್ತಿಯನ್ನು ಪಕ್ಷದ ಸಂಘಟನೆನಗಾಗಿ ಬಳಸಬೇಕಿದೆ, ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರೇ ಮುಂದುವರಿಯಲಿ ತನ್ನ ಅಭ್ಯಂತರವೇನೂ ಇಲ್ಲ ಎಂದು ಶ್ರೀರಾಮುಲು ಹೇಳಿದರು. ಅವಕಾಶವಿದ್ದರೆ ತನಗೂ ರಾಜ್ಯಾಧ್ಯಕ್ಷನ ಸಿಗಲಿ ಎನ್ನುವ ಶ್ರೀರಾಮುಲು ಅಧ್ಯಕ್ಷ ಸ್ಥಾನಕ್ಕೆ ತಾನೂ ಆಕಾಂಕ್ಷಿ ಅನ್ನೋದನ್ನು ಸ್ಪಷ್ಟಪಡಿಸುತ್ತಾರೆ.

ವಿಜಯನಗರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಅವರು ಯಾವತ್ತೂ ಪಾರ್ಟಿಯ ವಿರುದ್ಧ ಮಾತಾಡಿದವರಲ್ಲ, ಕೆಲ ವ್ಯಕ್ತಿಗಳ ವಿರುದ್ಧ ಅವರು ಮಾತಾಡಿದ್ದಾರೆ, ವ್ಯಕ್ತಿಗತ ಟೀಕೆಯು ಯಾವತ್ತೂ ಪಕ್ಷ ವಿರೋಧಿ ಚಟುವಟಿಕೆಯಾಗಲಾರದು, ಯತ್ನಾಳ್ ನಿರಂತರವಾಗಿ ಪಕ್ಷದ ಒಳಿತನ್ನು ಬಯಸಿದ್ದಾರೆ, ವಿಜಯೇಂದ್ರ ಜೊತೆ ಅವರಿಗೆ ಸಂಘಟಾನಾತ್ಮಕ ಭಿನ್ನಾಭಿಪ್ರಾಯಗಳಿರಬಹುದು, ಆದರೆ ಪಕ್ಷದ ರಾಷ್ಟ್ರೀಯ ನಾಯಕರು ಅವರಿಬ್ಬರ ನಡುವಿನ ಮತಭೇದ, ಅಸಮಾಧಾನ ಮತ್ತು ಭಿನ್ನಾಭಿಪ್ರಾಯಗಳನ್ನು ದೂರ ಮಾಡಲಿದ್ದಾರೆ ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಾಂಗ್ರೆಸ್ಸಿಗರಿಗೆ ನಿರಾಸೆ, ಬಿಜೆಪಿ ಬಿಡೋದಿಲ್ಲ ಅಂತ ಖಚಿತಪಡಿಸಿದ ಮಾಜಿ ಸಚಿವ ಬಿ ಶ್ರೀರಾಮುಲು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.