ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದ ಮಾಜಿ ಸಚಿವ ಬಿ ಶ್ರೀರಾಮಲು

ಅರುಣ್​ ಕುಮಾರ್​ ಬೆಳ್ಳಿ

Updated on: Feb 10, 2025 | 7:21 PM

ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ನೇರವಾಗಿ ಸಮರ ಸಾರುವ ಮೂಲಕ ಶ್ರೀರಾಮುಲು ಸುದ್ದಿಯಲ್ಲಿದ್ದಾರೆ. ಸೋಜಿಗದ ಸಂಗತಿಯೆಂದರೆ ಅವರು ಬಿಜೆಪಿಯ ರಾಜ್ಯಾಧ್ಯಕ್ಷನಾಗುವ ಇಂಗಿತ ವ್ಯಕ್ತಪಡಿಸಿದ್ದು. ಕೋಲಾರದಲ್ಲಿ ಮಾಧ್ಯಮದವರ ಜೊತೆ ಮಾತಾಡಿದ್ದ ಅವರು ತಾನು ಬಿಎಸ್ ಯಡಿಯೂರಪ್ಪನವರ ಕುಟುಂಬದ ಒಂದು ಭಾಗ ಮತ್ತು ವಿಜಯೇಂದ್ರ ತನಗೆ ತಮ್ಮನಿದ್ದಂತೆ ಎಂದು ಹೇಳಿದ್ದರು.

ಪ್ರಯಾಗ್​ರಾಜ್ (ಉತ್ತರ ಪ್ರದೇಶ): ಕುಂಭಮೇಳ ಅರಂಭವಾಗಿ ಹೆಚ್ಚು ಕಡಿಮೆ ಒಂದು ತಿಂಗಳಾಗುತ್ತಾ ಬಂದರೂ ಪ್ರಯಾಗ್​ ರಾಜ್ ಬಳಿಯ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುವವರ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಕಳೆದೆರಡು ವಾರಗಳಿಂದ ಸುದ್ದಿಯಲ್ಲಿರುವ ಮಾಜಿ ಸಚಿವ ಬಿ ಶ್ರೀರಾಮುಲು ಅವರು ಇಂದು ತಮ್ಮ ಪತ್ನಿ ಭಾಗ್ಯಲಕ್ಷ್ಮಿ ಜೊತೆ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಪ್ರಾಯಶಃ ರಾಮುಲು ಪುಣ್ಯ ಸ್ನಾನ ಮಾಡುತ್ತಿದ್ದ ಸ್ಥಳ ಸಮತಟ್ಟಾಗಿರಲಿಲ್ಲ ಮತ್ತು ಭಾಗ್ಯಲಕ್ಷ್ಮಿಯವರು ಸಹ ನೀರಲ್ಲಿ ಮುಳುಗಲು ಹೆದರುತ್ತಿದ್ದರು. ಶ್ರೀರಾಮುಲು ಅವರೇ ಅಂಜುವ ಅವಶ್ಯಕತೆ ಇಲ್ಲವೆಂದು ಅವರ ಕೈಹಿಡಿದು ಪುಣ್ಯಸ್ನಾನದ ಸಂಸ್ಕಾರ ನೆರವೇರಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ರಾಜ್ಯಾದ್ಯಂತ ಯಾತ್ರೆ ಮಾಡುವೆ: ಮಾಜಿ ಸಚಿವ ಶ್ರೀರಾಮುಲು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.