AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಸಾರ್ವಜನಿಕ ಬದುಕಿಗೆ ವಾಪಸ್ಸಾಗಲಿರುವುದನ್ನು ಖಚಿತಪಡಿಸಿದ ಮಾಜಿ ಸಚಿವ ಜಿ ಜನಾರ್ಧನರೆಡ್ಡಿ

ಕೊಪ್ಪಳ: ಸಾರ್ವಜನಿಕ ಬದುಕಿಗೆ ವಾಪಸ್ಸಾಗಲಿರುವುದನ್ನು ಖಚಿತಪಡಿಸಿದ ಮಾಜಿ ಸಚಿವ ಜಿ ಜನಾರ್ಧನರೆಡ್ಡಿ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Dec 05, 2022 | 12:34 PM

Share

ಅವರ ಮತ್ತು ಸಾರಿಗೆ ಸಚಿವ ಬಿ ಶ್ರೀರಾಮುಲು ಅವರ ನಡುವೆ ವೈಮನಸ್ಸು ತಲೆದೋರಿದೆ ಎಂಬ ಆರೋಪದ ಬಗ್ಗೆ ಅವರು ಯಾವುದನ್ನೂ ಸ್ಪಷ್ಟವಾಗಿ ಹೇಳಲಿಲ್ಲ.

ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ (G Janardhan Reddy) ಅವರು ಸಾರ್ವಜನಿಕ ಬದುಕಿಗೆ ವಾಪಸ್ಸಾಗುವುದು ಹೆಚ್ಚು ಕಡಿಮೆ ಖಚಿತವಾಗಿದೆ. ಕೊಪ್ಪಳದ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ (Anjanadri) ಬಳಿಯಿರುವ ಪಂಪ ಸರೋವರದಲ್ಲಿ ಹನುಮ ಮಾಲೆ ಧಾರಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತಾಡಿದ ರೆಡ್ಡಿಯವರು, ರಾಜಕೀಯ ಬದುಕಿನ ತಮ್ಮ ಎರಡನೇ ಅಧ್ಯಾಯವನ್ನು ಗಂಗಾವತಿಯಿಂದ ಆರಂಭಿಸುವ ಇಂಗಿತ ವ್ಯಕ್ತಪಡಿಸಿದರು. ಅವರ ಮತ್ತು ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಅವರ ನಡುವೆ ವೈಮನಸ್ಸು ತಲೆದೋರಿದೆ ಎಂಬ ಆರೋಪದ ಬಗ್ಗೆ ಅವರು ಯಾವುದನ್ನೂ ಸ್ಪಷ್ಟವಾಗಿ ಹೇಳಲಿಲ್ಲ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ