ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಮಾಜಿ ಸಚಿವ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ

Edited By:

Updated on: Dec 21, 2025 | 11:27 AM

ಮಾಜಿ ಸಚಿವ ಕೆ.ಎನ್​. ರಾಜಣ್ಣ ಅವರು ಡಿ.ಕೆ. ಶಿವಕುಮಾರ್ ಭೇಟಿ ಕುರಿತು ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಯಾರನ್ನಾದರೂ ಭೇಟಿ ಮಾಡಬಹುದು. ಅದರಲ್ಲಿ ಯಾವುದೇ ರಾಜಕೀಯವಿಲ್ಲ, ಪಕ್ಷ ಸಂಘಟನೆ ಕುರಿತು ಚರ್ಚಿಸಲಾಯಿತು ಎಂದು ರಾಜಣ್ಣ ತಿಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಬೆಂಗಳೂರು, ಡಿಸೆಂಬರ್​ 21: ಶನಿವಾರದಂದು ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಮಾಜಿ ಸಚಿವ ಕೆ.ಎನ್​​ ರಾಜಣ್ಣ ಭೇಟಿ ಮಾಡಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಪಾರ್ಟಿ ಅಧ್ಯಕ್ಷರಾಗಿ ಭೇಟಿ ಮಾಡಿದ್ದರು. ಯಾರಿಗೆ ಬೇಕಾದರೂ ಭೇಟಿ ಮಾಡಬಹುದು, ಯಾರನ್ನಾದರೂ ಕರೆದು ಮಾತನಾಡಬಹುದು. ಪಕ್ಷದ ಹಿತದೃಷ್ಟಿಯಿಂದ ಏನೆಲ್ಲಾ ಮಾಡಬೇಕು ಅನಿಸುತ್ತೆ ಅವರು ಮಾಡುತ್ತಾರೆ. ಇದರಲ್ಲಿ ಯಾವುದೇ ಪ್ರಮುಖ ವಿಚಾರ ಇಲ್ಲ. ನಾವು ಯಾವಾಗಲೂ ಸಿದ್ದರಾಮಯ್ಯ ಪರವಾಗಿ ಇದ್ದೇವೆ. ಡಿಕೆ ಶಿವಕುಮಾರ್ ಏನೇ ಪ್ರಯತ್ನ ‌ಮಾಡಿದರು ಕೂಡ ನನ್ನ ಹಿಂದಿನ ಎಲ್ಲ ಹೇಳಿಕೆಳಿಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us