AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಹಳ್ಳಿಯ ಚಾಂಪಿಯನ್ ಹೋರಿ ‘ಕನಸುಗಾರ’ನ ಹುಟ್ಟುಹಬ್ಬದಲ್ಲಿ ಭಾಗಿಯಾದ ಎಂಪಿ ರೇಣುಕಾಚಾರ್ಯ

ಬಸವನಹಳ್ಳಿಯ ಚಾಂಪಿಯನ್ ಹೋರಿ ‘ಕನಸುಗಾರ’ನ ಹುಟ್ಟುಹಬ್ಬದಲ್ಲಿ ಭಾಗಿಯಾದ ಎಂಪಿ ರೇಣುಕಾಚಾರ್ಯ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 31, 2025 | 3:17 PM

Share

ಬಸವನಹಳ್ಳಿಯ ತಮ್ಮ ಊರಿನ ಹೆಮ್ಮೆಯೆನಿಸಿರುವ ಹೋರಿಗೆ ಕನಸುಗಾರ ಅಂತ ಹೆಸರನ್ನೂ ಇಟ್ಟಿದ್ದಾರೆ. ಹೋರಿಯ ಬರ್ತ್​ಡೇಯನ್ನು ಊರವರು ಬರೆದಿಟ್ಟಿರುವುದು ಶ್ಲಾಘನೀಯ. ಜನ ತಮ್ಮ ಸಾಕುನಾಯಿಯ ಹುಟ್ಟುಹಬ್ಬ ಆಚರಿಸುವುದನ್ನು ನಾವು ನೋಡುತ್ತಿರುತ್ತೇವೆ, ಅದರೆ ಹೋರಿಗಳದ್ದು ಅಪರೂಪ. ಮಾಜಿ ಸಚಿವ ಹೋರಿಗೆ ಕೇಕ್ ಕಟ್ ಮಾಡಿ ತಿನ್ನಿಸುತ್ತಾರೆ, ನಂತರ ತಾವೂ ತಿನ್ನುತ್ತಾರೆ.

ದಾವಣಗೆರೆ, ಮೇ 31: ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly polls) ಸೋತರೂ ಎಂಪಿ ರೇಣುಕಾಚಾರ್ಯ ಕ್ಷೇತ್ರದಲ್ಲಿ ಔಟ್​ಡೇಟೆಟ್ ಆಗಿಲ್ಲ, ಈಗಲೂ ಜನಪ್ರಿಯತೆ ಉಳಿಸಿಕೊಂಡಿದ್ದಾರೆ. ಇವತ್ತು, ಫಾರ್ ಎ ಚೇಂಜ್ ಅವರು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ರನ್ನು ಬಯ್ಯದೆ, ತೆಗಳದೆ, ಲೇವಡಿ ಮಾಡದೆ ಹೊನ್ನಾಳಿ ಕ್ಷೇತ್ರದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಚಾಂಪಿಯನ್ ಅನಿಸಿಕೊಂಡಿರುವ ಬಸವನಹಳ್ಳಿಯ ಹೋರಿಯೊಂದರ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲು ಆಗಮಿಸಿದರು. ಅವರು ಕಾರಲ್ಲಿ ಆಗಮಿಸಿದ ಕೂಡಲೇ ಚಿಕ್ಕಪುಟ್ಟ ಮಕ್ಕಳು ಓಡಿಬಂದು ರೇಣುಕಾಚಾರ್ಯರನ್ನು ಬರಮಾಡಿಕೊಳ್ಳುತ್ತಾರೆ.

ಇದನ್ನೂ ಓದಿ:  ಯತ್ನಾಳ್ ಹಿಂದೂ ನಾಯಕನಾಗಿದ್ದರೆ ಟೋಪಿ ಧರಿಸಿ, ಕಬಾಬ್ ತಿನ್ನುತ್ತ ಇಫ್ತಿಯಾರ್ ಕೂಟ ಏರ್ಪಡಿಸುತ್ತಿರಲಿಲ್ಲ: ರೇಣುಕಾಚಾರ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.