ಎಲ್ಲವೂ ಸುಸೂತ್ರ, ಒಂದು ಹಂತಕ್ಕೆ ಬರುತ್ತೆ: ಡಿಕೆ ಸುರೇಶ್ ಮಾತಿನ ಮರ್ಮವೇನು?​

Updated on: Dec 01, 2025 | 10:27 PM

ನಾನು ನನ್ನ ವೈಯುಕ್ತಿಕ ಕೆಲಸ ಮೇಲೆ ದೆಹಲಿಗೆ ತೆರಳಿದ್ದೆ, ಅದನ್ನೆಲ್ಲಾ ಹೇಳುವ ಅವಶ್ಯಕತೆಯಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್​ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಐಎಬಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ಎಲ್ಲವೂ ಒಂದು ಹಂತಕ್ಕೆ ಬರುತ್ತದೆ ಎಂದಿದ್ದಾರೆ.

ಬೆಂಗಳೂರು, ಡಿಸೆಂಬರ್ 01: ದೆಹಲಿಯಿಂದ ಹಿಂದಿರುಗಿದ ಮಾಜಿ ಸಂಸದ ಡಿ.ಕೆ.ಸುರೇಶ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಐಎಬಿ​​ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ನನ್ನ ವೈಯುಕ್ತಿಕ ಕೆಲಸ ಮೇಲೆ ದೆಹಲಿಗೆ ತೆರಳಿದ್ದೆ. ಅದನ್ನು ಹೇಳುವ ಅವಶ್ಯಕತೆಯಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಮೊನ್ನೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಗಿದೆ. ನಾಳೆನೂ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಎಲ್ಲವೂ ಒಂದು ಹಂತಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Dec 01, 2025 10:26 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More