ಚಂದ್ರಶೇಖರ್​ ಗೆಟ್​ ಲಾಸ್ಟ್​​ ಫ್ರಾಮ್​ ಕರ್ನಾಟಕ: ಎಡಿಜಿಪಿ ವಿರುದ್ಧ ಸಿಂಹ ಪ್ರತಾಪ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಹಂದಿಗೆ ಹೋಲಿಸಿ ಟೀಕಿಸಿದ್ದ ಎಡಿಜಿಪಿ ಚಂದಶೇಖರ್ ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ ವಾಗ್ದಾಳಿ ಮಾಡಿದ್ದಾರೆ. ಮಿಸ್ಟರ್ ಚಂದ್ರಶೇಖರ್ ಭಾಷೆ ಮೇಲೆ ಹಿಡಿತ ಇರಲಿ. ಹಂದಿಗಳು ಬೇಕಿದ್ದರೇ ಆಂಧ್ರಕ್ಕೆ ಹೋಗಿ ಎಂದು ಪ್ರತಾಪ್​​ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಂದ್ರಶೇಖರ್​ ಗೆಟ್​ ಲಾಸ್ಟ್​​ ಫ್ರಾಮ್​ ಕರ್ನಾಟಕ: ಎಡಿಜಿಪಿ ವಿರುದ್ಧ ಸಿಂಹ ಪ್ರತಾಪ
|

Updated on: Oct 01, 2024 | 12:09 PM

ಮೈಸೂರು, ಅಕ್ಟೋಬರ್​​ 01: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಹಂದಿಗೆ ಹೋಲಿಸಿ ಟೀಕಿಸಿದ್ದ ಎಡಿಜಿಪಿ ಚಂದಶೇಖರ್ (ADGP Chandrashekhar) ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ ವಾಗ್ದಾಳಿ ಮಾಡಿದ್ದಾರೆ. ಚಂದ್ರಶೇಖರ್​ ಗೆಟ್​ ಲಾಸ್ಟ್​​ ಫ್ರಾಮ್​ ಕರ್ನಾಟಕ ಎಂದು ಪ್ರತಾಪ್​ ಸಿಂಹ (Pratap Simha)​ ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳಿಗಿಂತ ಅಧಿಕಾರಿಗಳೇ ಹೆಚ್ಚು ಭ್ರಷ್ಟರು. ಚಂದ್ರಶೇಖರ್​ ಅವರ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಅವರ ಬಳಿ ದಾಖಲೆ ಇರಬಹುದು. ಅದಕ್ಕೆ ಆರೋಪ ಮಾಡಿದ್ದಾರೆ ಎಂದು ಹೇಳಿದರು.

ಅಧಿಕಾರಿ ಚಂದ್ರಶೇಖರ್ ಸತ್ಯಸಂಧನಾಗಿದ್ದರೇ, ಹೆಚ್​ಡಿ ಕುಮಾರಸ್ವಾಮಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲು ಮಾಡಲಿ. ಚಂದ್ರಶೇಖರ್ ಕರ್ನಾಟಕ ಕೇಡರ್ ಅಧಿಕಾರಿ ಅಲ್ಲ ಹಿಮಾಚಲ ಪ್ರದೇಶ ಕೇಡರ್ ಅಧಿಕಾರಿಯಾಗಿದ್ದಾರೆ. ನೀವು ಯಾಕೆ ಕರ್ನಾಟಕದಲ್ಲಿದ್ದಿರಿ? ಚಂದ್ರಶೇಖರ್ ನೀವು ಈ ರಾಜ್ಯದಿಂದ ತೊಲಗಿ, ಗೆಟ್ ಲಾಸ್ಟ್ ಎಂದರು.

ಸಿಎಂ ಹಾಗೂ ಡಿಸಿಎಂಗೆ ಯಾರಾದರೂ ಅಧಿಕಾರಿ ಹಂದಿ ಅಂಥ ಕರೆದಿದ್ದರೆ ಸುಮ್ಮನೆ ಇರುತ್ತಿದ್ದರಾ? ಸರ್ಕಾರ ಮೊದಲು ಚಂದ್ರಶೇಖರ್ ಅವರನ್ನು ಅಮಾನತು ಮಾಡಬೇಕು. ಕನ್ನಡಿಗ ಹೆಚ್​ ಡಿ ಕುಮಾರಸ್ವಾಮಿ ಅವರ ಮೇಲೆ ಏನೇನೋ ಮಾತಾಡಿದರೆ ಸುಮ್ಮನೆ ಬಿಡಲ್ಲ. ಮಿಸ್ಟರ್ ಚಂದ್ರಶೇಖರ್ ಭಾಷೆ ಮೇಲೆ ಹಿಡಿತ ಇರಲಿ. ಹಂದಿಗಳು ಬೇಕಿದ್ದರೇ ಆಂಧ್ರಕ್ಕೆ ಹೋಗಿ. ಅಲ್ಲೆ ಜಾಸ್ತಿ ಹಂದಿಗಳು ಇರುವುದು. ಚಂದ್ರಶೇಖರ್ ನಿಮ್ಮ ಉದ್ಧಟತನ ನಮ್ಮ ಬಳಿ ನಡೆಯಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​