ಕೆಣಕಿದರೆ ಸುಮ್ಮನಿರಲ್ಲ ಅಂತ ಹೇಳುವ ಕುಮಾರಸ್ವಾಮಿ ನಾಗರಹಾವೇ ಇಲ್ಲ ಹೆಬ್ಬಾವೇ? ಚಲುವರಾಯಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: May 03, 2024 | 7:35 PM

ಶಿವಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಅತ್ಯಂತ ಜವಾಬ್ದಾರಿ ಸ್ಥಾನದಲ್ಲಿರುವವರು, ಅವರ ಬಗ್ಗೆ ಅಷ್ಟೆಲ್ಲ ಕೀಳಾಗಿ ಮಾತಾಡುವುದು ಒಬ್ಬ ಮಾಜಿ ಮುಖ್ಯಮಂತ್ರಿ ಶೋಭೆ ನೀಡದು, ಶಿವಕುಮಾರ್ ಅವರನ್ನು ಹೆದರಿಸುವ ಬೆದರಿಸುವ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದರು.

ಶಿವಮೊಗ್ಗ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ತೀವ್ರ ಸ್ವರೂಪದ ವಾಗ್ದಾಳಿ ನಡೆಸುತ್ತಿರುವ ಹೆಚ್ ಡಿ ಕುಮಾರಸ್ವಾಮಿಯವರನ್ನು (HD Kumaraswamy) ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ತರಾಟೆಗೆ ತೆಗದುಕೊಂಡರು. ಕುಮಾರಸ್ವಾಮಿ ಬಹಳ ವರ್ಷಗಳಿಂದ ತನಗೆ ಸ್ನೇಹಿತ ಆದರೆ ಈ ಮಟ್ಟಕ್ಕೆ ಇಳಿದು ಅವರು ಮಾತಾಡುತ್ತಾರೆ ಅಂತ ಭಾವಿಸಿರಲಿಲ್ಲ. ಶಿವಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಅತ್ಯಂತ ಜವಾಬ್ದಾರಿ ಸ್ಥಾನದಲ್ಲಿರುವವರು, ಅವರ ಬಗ್ಗೆ ಅಷ್ಟೆಲ್ಲ ಕೀಳಾಗಿ ಮಾತಾಡುವುದು ಒಬ್ಬ ಮಾಜಿ ಮುಖ್ಯಮಂತ್ರಿ ಶೋಭೆ ನೀಡದು ಎಂದು ಚಲುವರಾಯಸ್ವಾಮಿ ಹೇಳಿದರು. ಶಿವಕುಮಾರ್ ಅವರನ್ನು ಹೆದರಿಸುವ ಬೆದರಿಸುವ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ನನ್ನನ್ನು ಕೆಣಕಿದರೆ ಸುಮ್ಮನಿರಲ್ಲ ಅನ್ನುವ ಕುಮಾರಸ್ವಾಮಿ ನಾಗರಹಾವೇ ಅಥವಾ ಹೆಬ್ಬಾವೇ? ಇವರಾಡುವ ಮಾತುಗಳಿಂದ ಹೆಚ್ ಡಿ ದೇವೇಗೌಡ ತೀವ್ರವಾಗಿ ನೊಂದುಕೊಂಡಿರುತ್ತಾರೆ ಎಂದು ಸಚಿವ ಹೇಳಿದರು. ಇವರು ಹೆದರಿಸಿದಾಕ್ಷಣ ಶಿವಕುಮಾರ್ ಹೆದರಿಬಿಡುತ್ತಾರೆಯೇ? ಅವರು ಕುಮಾರಸ್ವಾಮಿಗಿಂತ ಹೆಚ್ಚು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದಾರೆ, ಕುಮಾರಸ್ವಾಮಿಯ ಎಲ್ಲ ಸವಾಲುಗಳಿಗೆ ಶಿವಕುಮಾರ್ ತಯಾರಾಗಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಓದಿ:   ಮಂಡ್ಯದಲ್ಲಿ ಹಿಂದೆ ನಾವು ಸೋತಾಗ ಕುಮಾರಸ್ವಾಮಿಯಂತೆ ಚಡಪಡಿಸಿರಲಿಲ್ಲ: ಎನ್ ಚಲುವರಾಯಸ್ವಾಮಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.