Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಗರ್ವಭಂಗ ಆಗಬೇಕೆಂದು ಹೇಳಿದ್ದು ಯಾಕೆ ಅನ್ನೋದನ್ನು ವಿವರಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಸಿದ್ದರಾಮಯ್ಯ ಗರ್ವಭಂಗ ಆಗಬೇಕೆಂದು ಹೇಳಿದ್ದು ಯಾಕೆ ಅನ್ನೋದನ್ನು ವಿವರಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Apr 15, 2024 | 7:20 PM

150 ಕೋಟಿ ಜನರಿರುವ ದೇಶದ ಆಡಳಿತ ನಡೆಸುತ್ತಿರುವ ಪ್ರಧಾನಿಯವರ ಬಗ್ಗೆ 6 ಕೋಟಿ ಜನಸಂಖ್ಯೆಯುಳ್ಳ ಒಬ್ಬ ರಾಜ್ಯದ ಮುಖ್ಯಮಂತ್ರಿ ಮನಸ್ಸಿಗೆ ಬಂದಂತೆ ಮಾತಾಡಿದರೆ ಆ ಮುಖ್ಯಮಂತ್ರಿಯ ಗರ್ವಭಂಗ ಆಗಬೇಡವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಯದಲ್ಲಿ ತಾನು ಗರ್ವಭಂಗ ಪದ ಬಳಸಿದ್ದು ಯಾರಿಗಾದರೂ ತಪ್ಪೆನಿಸಿದ್ದರೆ ಕ್ಷಮೆ ಕೇಳುತ್ತೇನೆ ಎಂದು ದೇವೇಗೌಡ ಹೇಳಿದರು.

ತುಮಕೂರು: ನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್N (V Somanna) ಪರ ಮತ ಯಾಚಿಸಿಸ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡ (HD Devegowda) ರಾಜ್ಯದಲ್ಲಿ ಕಾಂಗ್ರೆಸ್ ದುರಾರಡಳಿ ನಡುಸುತ್ತಿದೆ ಮತ್ತು ರಾಜ್ಯದೆಲ್ಲೆಡೆ ನೀರಿಗಾಗಿ ಹಾಹಾಕಾರವೆದ್ದಿದ್ದರೂ ಅದನ್ನು ಪರಿಹರಿಸದೆ ಕೇಂದ್ರ ಸರ್ಕಾರವನ್ನು ದೂರುವುದರಲ್ಲಿ ಸಮಯ ವ್ಯರ್ಥ ಮಾಡುತ್ತಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಗರ್ವಭಂಗ ಮಾಡಬೇಕು ಅಂತ ಹೇಳಿದ್ದನ್ನು ಪ್ರಸ್ತಾಪಿಸಿದ ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) 150 ಕೋಟಿ ಜನರನ್ನೊಳಗೊಂಡ ಭಾರತದ ಚುಕ್ಕಾಣಿ ಹಿಡಿದು ಸಮರ್ಥ ಆಡಳಿತ ನೀಡುತ್ತಾ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುತ್ತಿದ್ದಾರೆ. 150 ಕೋಟಿ ಜನರಿರುವ ದೇಶದ ಆಡಳಿತ ನಡೆಸುತ್ತಿರುವ ಪ್ರಧಾನಿಯವರ ಬಗ್ಗೆ 6 ಕೋಟಿ ಜನಸಂಖ್ಯೆಯುಳ್ಳ ಒಬ್ಬ ರಾಜ್ಯದ ಮುಖ್ಯಮಂತ್ರಿ ಮನಸ್ಸಿಗೆ ಬಂದಂತೆ ಮಾತಾಡಿದರೆ ಆ ಮುಖ್ಯಮಂತ್ರಿಯ ಗರ್ವಭಂಗ ಆಗಬೇಡವೇ?

ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಯದಲ್ಲಿ ತಾನು ಗರ್ವಭಂಗ ಪದ ಬಳಸಿದ್ದು ಯಾರಿಗಾದರೂ ತಪ್ಪೆನಿಸಿದ್ದರೆ ಕ್ಷಮೆ ಕೇಳುತ್ತೇನೆ ಎಂದು ದೇವೇಗೌಡ ಹೇಳಿದರು. ಮುಂದುವರಿದು ಮಾತಾಡಿದ ಅವರು, ಒಂದು ವೇಳೆ ಸೋಮಣ್ಣ ಈ ಸೋತರೆ ತಾನು ಪ್ರಧಾನಿ ಮೋದಿಯವರ ಬಳಿ ಹೋಗಿ ಕಾವೇರಿ ನದಿ ನೀರಿನ ವಿವಾದವನ್ನು ಬಗೆಹರಿಸಿ ಅಂತ ತಲೆಯೆತ್ತಿ ಕೇಳುವ ಯೋಗ್ಯತೆ ತನಗಿರಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಡಿಕೆ ಸಹೋದರರ ದೌರ್ಜನ್ಯ ಕೊನೆಗಾಣಿಸಲು ಮಂಜುನಾಥ್ ಕಣಕ್ಕಿಳಿಸಿದ್ರು ಮೋದಿ: ಹೆಚ್​ಡಿ ದೇವೇಗೌಡ