Bengaluru: ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಟೀಕಿಸುತ್ತಾ ಗೇಲಿ ಮಾಡಿದ ಸಿದ್ದರಾಮಯ್ಯ
ವಿದೇಶಗಳಲ್ಲಿರುವ ಭಾರತೀಯರ ಕಪ್ಪುಹಣ ತಂದು ಎಲ್ಲರ ಖಾತೆಗಳಿಗೆ ತಲಾ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಯಾರ ಖಾತೆಗೂ 15 ಪೈಸೆ ಕೂಡ ಜಮಾ ಆಗಲಿಲ್ಲ ಎಂದು ಸಿದ್ದರಾಮಯ್ಯ ಕುಹುಕವಾಡಿದರು.
ಬೆಂಗಳೂರು: ನಗರದ ಸರ್ವಜ್ಞ ನಗರ ಕ್ಷೇತ್ರದಲ್ಲಿ ಅಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶವೊಂದರಲ್ಲಿ ಮಾತಾಡಿದ ಸಿದ್ದರಾಮಯ್ಯ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಟೀಕಿಸುತ್ತಾ ಗೇಲಿ ಮಾಡಿದರು. ಕಳೆದ 9 ವರ್ಷಗಳಿಂದ ಪ್ರಧಾನಿ ಮೋದಿಯವರು ಸುಳ್ಳುಗಳನ್ನು ಹೇಳುತ್ತಾ ದೇಶದ ಯುವಜನಾಂಗವನ್ನು (young Indians) ದಾರಿ ತಪ್ಪಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಅಧಿಕಾರಕ್ಕೆ ಬರುವ ಮೊದಲು ಯುವಕರಿಗೆ ಪ್ರತಿವರ್ಷ ಎರಡು ಕೋಟಿ ಉದ್ಯೋಗಗಳನ್ನು ಸೃಷ್ಟಿಮಾಡುವ ಭರವಸೆ ನೀಡಿದ್ದ ಪ್ರಧಾನಿಗಳು ನಂತರ ತಾವು ಹೇಳಿದ್ದನ್ನು ಮರೆತುಬಿಟ್ಟರು. ವಿದೇಶಗಳಲ್ಲಿರುವ ಭಾರತೀಯರ ಕಪ್ಪುಹಣ ತಂದು ಎಲ್ಲರ ಖಾತೆಗಳಿಗೆ ತಲಾ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಯಾರ ಖಾತೆಗೂ 15 ಪೈಸೆ ಕೂಡ ಜಮಾ ಆಗಲಿಲ್ಲ ಎಂದು ಕುಹುಕವಾಡಿದರು. ಅವರ ‘ಅಚ್ಛೇ ದಿನ್ ಆಯೆಂಗೆ’ ಸ್ಲೋಗನ್ ಒಂದು ಸ್ಲೋಗನ್ ಆಗೇ ಉಳಿದುಬಿಟ್ಟಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ

