ವಿವಾದಾತ್ಮಕ ಮಾತುಗಳ ಮೂಲಕ ಪುನಃ ಮುನ್ನೆಲೆಗೆ ಬಂದ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ

Updated on: Jan 13, 2024 | 5:14 PM

ಕಾಂಗ್ರೆಸ್ ನಮ್ಮ ವಿರೋಧಿಯಲ್ಲ, ಅದೊಂದು ರಾಜಕೀಯ ಪಕ್ಷ ಅಷ್ಟೇ, ನಮ್ಮನ್ನು ಎದುರಿಸುವಂಥ ಸಾಮರ್ಥ್ಯ ಅದರಲ್ಲಿಲ್ಲ ಆದರೆ ಕಾಂಗ್ರೆಸ್ ನಾಯಕರ ಗತಿಗೆಟ್ಟ ಮಾನಸಿಕತೆ ನಮ್ಮ ವಿರೋಧಿ ಎಂದು ಹೆಗಡೆ ಹೇಳುತ್ತಾರೆ. 22ರಂದು ರಾಮಮಂದಿರಕ್ಕೆ ಹೋಗಲ್ಲ, ಅದಾದ ಮೇಲೆ ಹೋಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿರುವ ಮಾತನ್ನು ಅಣಕಿಸುವ ಹೆಗಡೆ, ನೀನು ಹೋಗು ಬಿಡು, ರಾಮಮಂದಿರ ನಿಲ್ಲಲ್ಲ ಮಗನೇ! ಅನ್ನುತ್ತಾರೆ.

ಕಾರವಾರ: ಬಹಳ ದಿನಗಳಿಂದ ನೇಪಥ್ಯಕ್ಕೆ ಸರಿದಿದ್ದ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅನಂತಕುಮಾರ್ ಹೆಗಡೆ (Anant Kumar Hegde) ಇಂದು ಕಾರವಾರದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಂಬೋಧಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಅವಹೇಳನಕಾರಿಯಾಗಿ (derogatory) ಪದ ಬಳಕೆ ಮಾಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಹಿಂದೆ ಕೇಂದ್ರದಲ್ಲಿ ಸಚಿವರಾಗಿದ್ದ ಹೆಗಡೆ ರಾಜ್ಯದ ಮುಖ್ಯಮಂತ್ರಿಯನ್ನು ‘ಮಗನೇ’ ಅಂತ ಹೇಳಿದ್ದನ್ನು ಅವರ ಪಕ್ಷದವರೇ ಅನುಮೋದಿಸಲಾರರು. ರಾಜಕೀಯದಲ್ಲಿ ಟೀಕೆ ಟಿಪ್ಪಣಿ ಸಾಮಾನ್ಯ, ಅದರೆ ಯಾರೂ ಭಾಷೆಯ ಎಲ್ಲೆ ಮೀರಲ್ಲ. ಮೊದಲಿನಿಂದಲೂ ಹಿಂದೂಗಳನ್ನು ಒಡೆಯುತ್ತಾ ಬಂದಿರುವ ಕಾಂಗ್ರೆಸ್ ಪಕ್ಷವನ್ನು ಪುನಃ ಮೇಲೇಳದಂತೆ ಮತ್ತು ಪುನರ್ಜನ್ಮ ಕಾಣದಂತೆ ಸೋಲಿಸಬೇಕು ಅಂತ ಹೆಗಡೆ ಹೇಳುತ್ತಾರೆ. ಮುಂದುವರಿದು ಮಾತಾಡುವ ಅವರು ಕಾಂಗ್ರೆಸ್ ನಮ್ಮ ವಿರೋಧಿಯಲ್ಲ, ಅದೊಂದು ರಾಜಕೀಯ ಪಕ್ಷ ಅಷ್ಟೇ, ನಮ್ಮನ್ನು ಎದುರಿಸುವಂಥ ಸಾಮರ್ಥ್ಯ ಅದರಲ್ಲಿಲ್ಲ ಆದರೆ ಕಾಂಗ್ರೆಸ್ ನಾಯಕರ ಗತಿಗೆಟ್ಟ ಮಾನಸಿಕತೆ ನಮ್ಮ ವಿರೋಧಿ ಎಂದು ಅವರು ಹೇಳುತ್ತಾರೆ. 22ರಂದು ರಾಮಮಂದಿರಕ್ಕೆ ಹೋಗಲ್ಲ, ಅದಾದ ಮೇಲೆ ಹೋಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿರುವ ಮಾತನ್ನು ಅಣಕಿಸುವ ಹೆಗಡೆ, ನೀನು ಹೋಗು ಬಿಡು, ರಾಮಮಂದಿರ ನಿಲ್ಲಲ್ಲ ಮಗನೇ! ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More