ಚಿಕ್ಕಮಗಳೂರಿನ ಬಣಕಲ್ ಬಳಿ ನಡೆದ ಭೀಕರ ರಸ್ತೆ ಅಫಘಾತದಲ್ಲಿ ನಾಲ್ವರ ದುರ್ಮರಣ, ಮೂವರ ಸ್ಥಿತಿ ಗಂಭೀರ
ಎದುರಿನಿಂದ ಬರುತ್ತಿದ್ದ ಲಾರಿಯೊಂದಕ್ಕೆ ಮುಖಾಮುಖಿಯಾಗಿ ಢಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದೆ. ಕಾರಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಚಿತ್ರದುರ್ಗ ಮೂಲದವರೆಂದು ಗೊತ್ತಾಗಿದೆ.
ಚಿಕ್ಕಮಗಳೂರು: ಓಮ್ನಿ ಕಾರಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರನ್ನು ಬಲಿ ಪಡೆದ ಇದು ನಿಸ್ಸಂದೇಹವಾಗಿ ಭೀಕರ ಅಪಘಾತ. ಮಂಜುನಾಥನ ದರ್ಶನಕ್ಕೆಂದು ಧರ್ಮಸ್ಥಳ ಹೋಗಿದ್ದ ನತದೃಷ್ಟರು ದರ್ಶನ ಪಡೆದು ವಾಪಸ್ಸು ತಮ್ಮೂರು ಚಿತ್ರದುರ್ಗಕ್ಕೆ ಬರುವಾಗ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಲಾರಿಯೊಂದಕ್ಕೆ ಮುಖಾಮುಖಿಯಾಗಿ ಢಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದೆ. ಕಾರಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಚಿತ್ರದುರ್ಗ ಮೂಲದವರೆಂದು ಗೊತ್ತಾಗಿದೆ. ಲಾರಿಗೆ ಗುದ್ದಿರುವ ಓಮ್ನಿ ಕಾರಿನ ಸ್ಥಿತಿ ನೋಡಿ. ಮೃತಪಟ್ಟವರ ಹೆಸರುಗಳು ಇನ್ನೂ ತಿಳಿದುಬಂದಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರಾಜಸ್ಥಾನದಲ್ಲಿ ಭೀಕರ ಅಪಘಾತ; ಟ್ರಕ್ಗೆ ಬಸ್ ಡಿಕ್ಕಿ ಹೊಡೆದು ಐವರು ಸಾವು, 12 ಜನರ ಸ್ಥಿತಿ ಗಂಭೀರ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
