ತುಂಗಭದ್ರಾ ಒಳಹರಿವು ನಿಲ್:ಲಕ್ಷಾಂತರ ಹೆಕ್ಟೆರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ ರೈತರಿಗೆ ಆತಂಕ
ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿದೆ. ಕಳೆದ ಒಂದು ವಾರದಿಂದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಶೂನ್ಯವಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ಮನೆ ಮಾಡಿದೆ.ಈಗಾಗಲೇ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿದೆ. ಆದರೆ ಒಳಹರಿವು ಝಿರೋ ಆಗಿರುವುದರಿಂದ, ಮುಂದಿನ ಎರಡನೇ ಬೆಳೆಗೆ ನೀರು ಸಿಗುತ್ತಾ,ಇಲ್ಲವಾ? ಎಂಬ ಅನುಮಾನ ರೈತರನ್ನು ಕಾಡುತ್ತಿದೆ.
ಕೊಪ್ಪಳ, (ಸೆಪ್ಟೆಂಬರ್ 17): ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿದೆ. ಕಳೆದ ಒಂದು ವಾರದಿಂದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಶೂನ್ಯವಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ಮನೆ ಮಾಡಿದೆ.ಈಗಾಗಲೇ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿದೆ. ಆದರೆ ಒಳಹರಿವು ಝಿರೋ ಆಗಿರುವುದರಿಂದ, ಮುಂದಿನ ಎರಡನೇ ಬೆಳೆಗೆ ನೀರು ಸಿಗುತ್ತಾ,ಇಲ್ಲವಾ? ಎಂಬ ಅನುಮಾನ ರೈತರನ್ನು ಕಾಡುತ್ತಿದೆ.
ಹೌದು…ತುಂಗಭದ್ರಾ ಜಲಾಶಯ.ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ನಾಲ್ಕು ಜಿಲ್ಲೆಗಳ ರೈತರ ಪಾಲಿಗೆ ಇದು ಕೇವಲ ಜಲಾಶಯವಲ್ಲ,ಜೀವನಾಡಿ.ಪ್ರತಿ ವರ್ಷ ಜಲಾಶಯದ ನೀರನ್ನೇ ನಂಬಿಕೊಂಡು ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ರೈತರು ಕೃಷಿ ಮಾಡುತ್ತಾರೆ. ಆದರೆ ಈ ಬಾರಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದ್ದು, ಕಳೆದ ಒಂದು ವಾರದಿಂದ ಒಳಹರಿವು ಶೂನ್ಯವಾಗಿದೆ.ಇತ್ತ ಅಚ್ಚುಕಟ್ಟು ಪ್ರದೇಶದಲ್ಲಿ ಈಗಾಗಲೇ ಭತ್ತ ನಾಟಿ ಕಾರ್ಯ ಭರದಿಂದ ಸಾಗಿದೆ.ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ರೈತರು ಭತ್ತ ನಾಟಿ ಮಾಡಿದ್ದಾರೆ.ಬೆಳೆ ಕೈಗೆ ಬರುವ ಹಂತದಲ್ಲಿ ನೀರಿನ ಕೊರತೆ ಎದುರಾದರೆ ಏನು ಮಾಡುವುದು ಎಂಬ ಚಿಂತೆ ರೈತರನ್ನು ಕಾಡುತ್ತಿದೆ.ಒಂದೆಡೆ ಒಳಹರಿವು ಝಿರೋ.ಮತ್ತೊಂದೆಡೆ ಎರಡನೇ ಬೆಳೆಯ ಪ್ರಶ್ನೆ.ಹೀಗಾಗಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ದ್ಯ ತುಂಗಭದ್ರಾ ಜಲಾಶಯದಲ್ಲಿ ಸುಮಾರು 83 ಟಿಎಂಸಿ ನೀರು ಸಂಗ್ರಹವಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವಾರ ಮತ್ತೊಮ್ಮೆ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲು ಸಚಿವರು ನಿರ್ಧರಿಸಿದ್ದಾರೆ.
