ಕೊಡಗಿನ ಪೊನ್ನಂಪೇಟ್ ಬಳಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಆರೋಪಿಯ ಶೋಧದಲ್ಲಿ ಪೊಲೀಸ್ 

Updated on: Mar 29, 2025 | 10:28 AM

ಹತ್ಯೆಯಾದವರ ಮನೆಯಲ್ಲಿ 10 ಮೂಟೆ ಕಾಫಿಪುಡಿ ಇದೆಯಂತೆ, ಅದರ ಮಾರಾಟಕ್ಕೆ ಸಂಬಂಧಿಸಿದಂತೆ ಕೊಲೆಗಳು ನಡೆದಿರಬಹುದೆಂದು ಪೊಲೀಸರು ಹೇಳುತ್ತಾರೆ. ನಾಗಿ ಮೂರನೇ ಮದುವೆಯಾದರೂ ತನ್ನ ಎರಡನೇ ಗಂಡನನ್ನು ಆಗಾಗ ಭೇಟಿಯಾಗುತ್ತಿದ್ದಳು, ಅದೇ ಕಾರಣಕ್ಕೆ ಆಕೆ ಮತ್ತು ಗಿರೀಶ್ ನಡುವೆ ಪದೇಪದೆ ಜಗಳ ಆಗುತಿತ್ತು ಎಂದು ಗ್ರಾಮಸ್ಥರು ಹೇಳುತ್ತಾರೆ.

ಮಡಿಕೇರಿ, ಮಾರ್ಚ್ 29: ಕೊಡಗು ಜಿಲ್ಲೆಯ ಪೊನ್ನಂಪೇಟ್ ತಾಲ್ಲೂಕಿನ ಕೋಳತೋಡು ಗ್ರಾಮದ ಕಾಫಿತೋಟದ ಲೈನ್ ಮನೆಯಲ್ಲಿ ನಿನ್ನೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೊಲೀಸ್ ಅಧಿಕಾರಿಯೊಬ್ಬರು (police official) ಹೇಳುವ ಪ್ರಕಾರ ಮನೆಯಲ್ಲಿದ್ದ ಎಲ್ಲ ನಾಲ್ವರು ಕೊಲೆಯಾಗಿರುವ ಕಾರಣ ಹತ್ಯೆಯ ಹಿಂದಿನ ಉದ್ದೇಶ ಮತ್ತು ಕೊಲೆಗಾರನ ಬಗ್ಗೆ ಖಚಿತವಾದ ಮಾಹಿತಿ ಇಲ್ಲ. ಹತ್ಯೆಯಾದವರನ್ನು ಕರಿಯ, ಗೌರಿ, ನಾಗಿ ಮತ್ತು ನಾಗಿಯ 7 ವರ್ಷದ ಮಗು ಕಾವೇರಿ ಎಂದು ಗುರುತಿಸಲಾಗಿದೆ. ನಾಗಿಯ ಮೂರನೇ ಗಂಡ ಗಿರೀಶ್ ಕೊಲೆಗಳನ್ನು ಮಾಡಿರುವ ಶಂಕೆಯಿದ್ದು ಅವನನ್ನು ಟ್ರೇಸ್ ಮಾಡಲು ಪೊಲೀಸರ ಒಂದು ತಂಡ ಕೇರಳ ಹೋಗಿದೆ ಎಂದು ಅಧಿಕಾರಿ ಹೇಳುತ್ತಾರೆ.

ಇದನ್ನೂ ಓದಿ: ರೈಲ್ವೆ ನಿಲ್ದಾಣದಲ್ಲಿ ಬಾಲಕಿ ಮತ್ತವಳ ತಂದೆಯ ಹತ್ಯೆಗೈದು, ತಾನೂ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More