ಚಾಮರಾಜನಗರದಲ್ಲೊಂದು ಹೃದಯ ವಿದ್ರಾವಕ ಘಟನೆ: ಗ್ರೈಂಡರ್ನಿಂದ ವಿದ್ಯುತ್ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ಗ್ರೈಂಡರ್ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ನೀರು ತರಲು ಅಡುಗೆ ಮನೆಗೆ ತೆರಳಿದ್ದ ಮಗು ಆನ್ ಆಗಿದ್ದ ಗ್ರೈಂಡರ್ ಮುಟ್ಟಿದ ತಕ್ಷಣ ಸಾವನ್ನಪ್ಪಿದೆ. ಪೋಷಕರ ಎದುರೇ ನಡೆದ ಈ ಹೃದಯ ವಿದ್ರಾವಕ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಚಾಮರಾಜನಗರ, ಜೂನ್ 17: ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ ಗ್ರೈಂಡರ್ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಪುಟ್ಟಮ್ಮ ಹಾಗೂ ಆನಂದ್ ದಂಪತಿಯ ಪುತ್ರಿ ಅದ್ವಿತಾ ಮೃತಪಟ್ಟ ದುರ್ದೈವಿ. ಮನೆಯಲ್ಲಿ ಆಟವಾಡುತ್ತಿದ್ದ ಅದ್ವಿತಾ ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದಳು. ಆ ಸಮಯದಲ್ಲಿ ಅಡುಗೆ ಮನೆಯಲ್ಲಿ ಆನ್ ಆಗಿದ್ದ ಗ್ರೈಂಡರ್ ಅನ್ನು ಮುಟ್ಟಿದ್ದಾಳೆ. ಗ್ರೈಂಡರ್ ಅನ್ನು ಮುಟ್ಟಿದ ತಕ್ಷಣವೇ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅದ್ವಿತಾಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 17, 2026 12:10 PM
Follow Us
