Ballari: ಗೃಹ ಲಕ್ಷ್ಮಿ ಯೋಜನೆಗೆ ಆನ್ಲೈನ್ ಅರ್ಜಿ ಸಲ್ಲಿಸುವುದಾಗಿ ನಂಬಿಸಿ ಮಹಿಳೆಯರಿಂದ ಹಣ ಪೀಕುತ್ತಿದ್ದ ವಂಚಕ ಪೊಲೀಸ್ ವಶಕ್ಕೆ

ಅರುಣ್​ ಕುಮಾರ್​ ಬೆಳ್ಳಿ

Updated on: Jun 29, 2023 | 10:14 AM

ಆದರೆ ಗುರುವಾರ ಬೆಳಗ್ಗೆ ಅಮಾಯಕರನ್ನು ವಂಚಿಸುತ್ತಿದ್ದ ಅವರನ್ನು ಅದೃಷ್ಟ ವಂಚಿಸಿದೆ.

ಬಳ್ಳಾರಿ: ಸರ್ಕಾರಗಳು ಜನಪರ ಯೋಜನೆಯೊಂದನ್ನು (populist schemes) ಜಾರಿಗೊಳಿಸಿದಾಗ ಅದರ ಲಾಭ ಪಡೆದುಕೊಳ್ಳಲು ಜನ ಅರ್ಜಿ ಸಲ್ಲಿಸಲು ಮುಂದಾಗುತ್ತಾರೆ ಮತ್ತು ಈ ಅಮಾಯಕ ಜನರನ್ನು (innocent people) ವಂಚಿಸಲೆಂದೇ ಒಂದು ಫ್ರಾಡ್​ ಮತ್ತು ಪಾಪಿಗಳ ಗುಂಪು ಹುಟ್ಟಿಕೊಳ್ಳುತ್ತದೆ. ಬಳ್ಳಾರಿಯಲ್ಲಿ ಅಂಥ ಮೋಸಗಾರರ ಮೂರು ತಂಡಗಳು ಗೃಹ ಲಕ್ಷ್ಮಿ (Gruha Lakshmi) ಮತ್ತು ಗೃಹ ಜ್ಯೋತಿ (Gruha Jyoti) ಯೋಜನೆಗೆ ಅರ್ಜಿ ಸಲ್ಲಿಸಲು ಅಣಿಯಾಗಿದ್ದ ಮಹಿಳೆಯರಿಂದ ಅವರ ಪರವಾಗಿ ತಾವೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದಾಗಿ ಹೇಳಿ ಒಬ್ಬೊಬ್ಬ ಮಹಿಳೆಯಿಂದ ರೂ. 150 ಪೀಕಿದ್ದಾರೆ. ಆದರೆ ಗುರುವಾರ ಬೆಳಗ್ಗೆ ಅಮಾಯಕರನ್ನು ವಂಚಿಸುತ್ತಿದ್ದ ಅವರನ್ನು ಅದೃಷ್ಟ ವಂಚಿಸಿದೆ. ಮಹಿಳೆಯರು ಮತ್ತು ಅವರೊಂದಿಗಿದ್ದ ಪುರುಷರು ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೇರೆ ಎರಡು ತಂಡದ ವಂಚಕರು ಓಡಿಹೋಗಿ ತಪ್ಪಿಸಿಕೊಂಡಿರುವರಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.