ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ

Edited By:

Updated on: Apr 16, 2026 | 5:55 PM

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನೂತನ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ ಹಾಗೂ ಕಟ್ಟಡ ಕಾರ್ಮಿಕರ ವಸತಿ ಶಾಲೆಯ ಗುದ್ದಲಿ ಪೂಜೆ ಸಮಾರಂಭದಲ್ಲಿ ಬಿರಿಯಾನಿ ಮತ್ತು ಉಚಿತ ಸೀರೆಗಾಗಿ ನೂಕುನುಗ್ಗಲು ಉಂಟಾಗಿದೆ. ಒಬ್ಬರ ಮೇಲೊಬ್ಬರು ಬಿದ್ದ ಪರಿಣಾಮ ಜನರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

ಕೋಲಾರ, ಏಪ್ರಿಲ್​​ 16: ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನಡೆದ ನೂತನ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ ಹಾಗೂ ಕಟ್ಟಡ ಕಾರ್ಮಿಕರ ವಸತಿ ಶಾಲೆಯ ಗುದ್ದಲಿ ಪೂಜೆ ವೇಳೆ ಚಿಕನ್ ಬಿರಿಯಾನಿ ಮತ್ತು ಸೀರೆಗಾಗಿ ಜನ ಮುಗಿಬಿದ್ದ ಪ್ರಸಂಗ ನಡೆದಿದೆ. ಒಬ್ಬರ ಮೇಲೊಬ್ಬರು ಬಿದ್ದು ನೂಕುನುಗ್ಗಲು ಉಂಟಾದ ಕಾರಣ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಡಬೇಕಾಯಿತು. ಶಾಸಕ ನಂಜೇಗೌಡ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, MLC ಅನಿಲ್ ಕುಮಾರ್ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us