ಮಹಿಳೆಯರಲ್ಲಿ ಮನವಿ ಟಿಕೆಟ್​ ಕೇಳಿ ಪಡೆಯಿರಿ: ಶಕ್ತಿ ಯೋಜನೆ ಅರಿವು ಮೂಡಿಸುತ್ತಿರುವ ಕಂಡಕ್ಟರ್ ಹಾಡು ವಿಡಿಯೋ ವೈರಲ್

Updated on: Jun 25, 2023 | 1:22 PM

ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಅರಕೇರಾ ಗ್ರಾಮದ ಕೆಎಸ್ ಆರ್ ಟಿಸಿ ಬಸ್ ಚಾಲಕ ಕಂ ನಿರ್ವಾಹಕನಿಂದ ಹಾಡು ಹಾಡುವ ಮೂಲಕ ಟಿಕೆಟ್​ ತೆಗೆದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ರಾಯಚೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಕೆಎಸ್​ಆರ್​ಟಿಸಿ ಬಸ್​ಗಳು ಫುಲ್​ ರಶ್​ ಆಗಿ ಓಡಾಡುತ್ತಿವೆ. ಇನ್ನು ಇದರ ಮಧ್ಯೆ ಕೆಲ ಶಕ್ತಿ ಯೋಜನೆ ಸಂಬಂಧ ಕೆಲವೆಡೆ ಗಲಾಟೆಗಳು ನಡೆಯುತ್ತಿವೆ. ಇನ್ನು ಕಾಮಿಡಿ ಪ್ರಸಂಗಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಸ್ ನಿರ್ವಾಹಕರು ಟಿಕೆಟ್​ ನೀಡುಲು ಹರಸಾಹಸಪಡುತ್ತಿರುವ ವಿಡಿಯೋಗಳು ವೈರಲ್​ ಆಗುತ್ತಿವೆ. ಅದರಂತೆ ಇಲ್ಲೋರ್ವ ಕಂಡಕ್ಟರ್​, ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸಂಬಂಧ ಕಂಡಕ್ಟರ್ ವಿಭಿನ್ನ ರೀತಿ ಅಭಿಯಾನ ಮಾಡುತ್ತಿದ್ದಾರೆ. ಹೌದು.. ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಅರಕೇರಾ ಗ್ರಾಮದ ಕೆಎಸ್ ಆರ್ ಟಿಸಿ ಬಸ್ ಚಾಲಕ ಕಂ ನಿರ್ವಾಹಕನಿಂದ ಹಾಡು ಹಾಡುವ ಮುಳಕ ಟಿಕೆಟ್​ ತೆಗೆದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಪಕ್ಕಾ ಡಾ.ರಾಜಕುಮಾರ್ ಅಭಿಮಾನಿಯಾಗಿರುವ ಕಂಡಕ್ಟರ್ ಗುರು ದೇವರಮನಿ, ಅಣ್ಣಾವ್ರ ಹಾಡುಗಳಿಗೆ ಸರ್ಕಾರದ ಶಕ್ತಿ ಯೋಜನೆ ಕುರಿತು ಸಾಹಿತ್ಯ ರಚಿಸಿ ಹಾಡು ಹಾಡುತ್ತಾರೆ. ಸದ್ಯ ಗುರು ದೇವರಮನಿ ವಿಡಿಯೋ ವೈರಲ್ ಆಗುತ್ತಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More