AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ ಕಾಂಗ್ರೆಸ್ ಬ್ಲಾಕ್​​​ನಲ್ಲಿ ಒಡಕು, ಪಕ್ಷ ತೊರೆಯಲು ನಿರ್ಧರಿಸಿದ ಹಲವಾರು ಕಾರ್ಯಕರ್ತರು!

ಹೊಸಕೋಟೆ ಕಾಂಗ್ರೆಸ್ ಬ್ಲಾಕ್​​​ನಲ್ಲಿ ಒಡಕು, ಪಕ್ಷ ತೊರೆಯಲು ನಿರ್ಧರಿಸಿದ ಹಲವಾರು ಕಾರ್ಯಕರ್ತರು!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 09, 2023 | 3:08 PM

Share

ತಮಗೆ ಅತೀವ ಬೇಸರ, ನಿರಾಶೆ, ಹತಾಷೆ ಮತ್ತು ದುಃಖವಾಗಿದ್ದು ಫೆಬ್ರುವರಿ 13 ರಂದು ಪಕ್ಷ ತೊರೆದು ನಾಗಾರಾಜ್ ಅವರ ಸಮಕ್ಷಮದಲ್ಲಿ ಬಿಜೆಪಿ ಸೇರಲು ನಿರ್ಧರಿಸಿದ್ದೇವೆ ಎಂದು ಕಣ್ಣೀರು ಹಾಕುತ್ತಾ ಹೇಳಿದರು.

ಹೊಸಕೋಟೆಯ (Hoskote) ತಾಲ್ಲೂಕು ಕಾಂಗ್ರೆಸ್ ನಲ್ಲಿ ಅಸಮಾಧಾನ, ಭಿನ್ನಮತ ತಾರಕಕ್ಕೇರಿ ಒಂದು ಬಣದ ಹಲವಾರು ಕಾರ್ಯಕರ್ತರು ಪಕ್ಷದ ಕಚೇರಿಗೆ ಬಣ್ಣ ಬಳಿದು, ಬೀಗ ಜಡಿದು, ಸಚಿವ ಎಮ್ ಟಿ ಬಿ ನಾಗರಾಜ್ (MTB Nagaraj) ಸಮಕ್ಷಮ ಬಿಜೆಪಿಗೆ ಸೇರುವ ನಿರ್ಧಾರ ಮಾಡಿದ್ದಾರೆ. ಹೊಸಕೋಟೆ ಪಟ್ಟಣದಲ್ಲಿಂದು ಮಾಧ್ಯಮದವರೊಂದಿಗೆ ಮಾತಾಡಿದ ಕಾಂಗ್ರೆಸ್ ಮುಖಂಡರೊಬ್ಬರು (Congress leader), ಬದುಕಿಡೀ ಪಕ್ಷಕ್ಕಾಗಿ ಬೆವರು ಸುರಿಸಿ ಜೀವ ತೇಯ್ದ ತಮ್ಮನ್ನು ಕಡೆಗಣಿಸಿ ನಿನ್ನೆ ಮೊನ್ನೆ ಪಕ್ಷ ಸೇರಿದವರಿಗೆ ಮನ್ನಣೆ ನೀಡಲಾಗುತ್ತಿದೆ, ತಮಗೆ ಅತೀವ ಬೇಸರ, ನಿರಾಶೆ, ಹತಾಷೆ ಮತ್ತು ದುಃಖವಾಗಿದ್ದು ಫೆಬ್ರುವರಿ 13 ರಂದು ಪಕ್ಷ ತೊರೆದು ನಾಗಾರಾಜ್ ಅವರ ಸಮಕ್ಷಮದಲ್ಲಿ ಬಿಜೆಪಿ ಸೇರಲು ನಿರ್ಧರಿಸಿದ್ದೇವೆ ಎಂದು ಕಣ್ಣೀರು ಹಾಕುತ್ತಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.