ರಾಮನಗರ ಇವತ್ತಿನಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಸಿಕೊಳ್ಳುವುದು: ಡಿಕೆ ಶಿವಕುಮಾರ್, ಡಿಸಿಎಂ

ಅರುಣ್​ ಕುಮಾರ್​ ಬೆಳ್ಳಿ

Updated on: May 22, 2025 | 5:11 PM

ಬಿಡಿಎ ವಿನ್ಯಾಸಗೊಳಿಸಿರುವ ಲೇಔಟ್​​ಗಳಲ್ಲಿ ನಿವೇಶನಗಳನ್ನು ಖರೀದಿಸಿರುವ ಕೆಲ ಸಂಘಸಂಸ್ಥೆಗಳು ಹಣವನ್ನು ಪಾವತಿಸದೆ ಬಾಕಿಯುಳಿಸಿಕೊಂಡಿವೆ, ಅವರ ಬಾಕಿಯ ಮೇಲಿನ ಬಡ್ಡಿಯನ್ನು ಒಮ್ಮೆ ಮನ್ನಾ ಮಾಡಲು ಸಂಪುಟ ನಿರ್ಧರಿಸಿದೆ, ಬಾಕಿಯುಳಿಸಿಕೊಂಡವರು 120 ದಿನಗಳಲ್ಲಿ ಅದನ್ನು ಚುಕ್ತಾ ಮಾಡಿದರೆ ಬಡ್ಡಿ ಮನ್ನಾ ಆಗುತ್ತದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು, ಮೇ 22: ಇವತ್ತಿನ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇವತ್ತಿನಿಂದ ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South District) ಎಂದು ಕರೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು. ಇದಕ್ಕೆ ಸಂಬಂಧಿಸಿದಂತೆ ಆದೇಶ ಕೂಡ ಹೊರಬೀಳಲಿದೆ, ಜಿಲ್ಲಾ ಕೇಂದ್ರ ರಾಮನಗರದಲ್ಲೇ ಉಳಿಯುತ್ತದೆ, ಹೆಡ್​​ಕ್ವಾರ್ಟರ್ಸ್ ನಲ್ಲಿ ಬದಲಾವಣೆ ಇರೋದಿಲ್ಲ, ಕೆಲಸ ಕಾರ್ಯ, ಕೋರ್ಟು-ಕಚೇರಿ ಎಂದಿನಂತೆ ರಾಮನಗರದಲ್ಲೇ ಮುಂದುವರಿಯುತ್ತವೆ, ಎಂದು ಹೇಳಿದ ಶಿವಕುಮಾರ್ ಈ ಸಂತಸದಾಯಕ ಘೋಷಣೆಗಾಗಿ ಎಲ್ಲರೂ ಕಾತುರದಿಂದ ಎದುರು ನೋಡುತ್ತಿದ್ದರು ಎಂದರು.

ಇದನ್ನೂ ಓದಿ:  ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.