AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಎಸ್​ಎಸ್​ಎಲ್​ಸಿ ಪಾಸಾದ ಬಾಲಕಿಯ ಹತ್ಯೆ ನಡೆದ ಸ್ಥಳದ ಪರಿಶೀಲನೆ ನಡೆಸಿದ ಎಫ್​ಎಸ್​ಎಲ್ ​ತಂಡ

ಕೊಡಗು: ಎಸ್​ಎಸ್​ಎಲ್​ಸಿ ಪಾಸಾದ ಬಾಲಕಿಯ ಹತ್ಯೆ ನಡೆದ ಸ್ಥಳದ ಪರಿಶೀಲನೆ ನಡೆಸಿದ ಎಫ್​ಎಸ್​ಎಲ್ ​ತಂಡ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 10, 2024 | 12:25 PM

Share

ವಿಷಯ ಗೊತ್ತಾದ ಬಳಿಕ ಕುಪಿತಗೊಂಡ ಓಂಕಾರಪ್ಪ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪಾಶವೀ ಕೃತ್ಯವೆಸಗಿದ್ದಾನೆ. ಕೊಲೆ ನಡೆದ ಸ್ಥಳವನ್ನು ಕೊಡಗು ಹೆಚ್ಚುವರಿ ಎಸ್ ಪಿ ಸುಂದರ್ ರಾಜ್, ಎಫ್ ಎಸ್ ಎಲ್ ತಂಡ ಮತ್ತು ಶ್ವಾನದಳ ಪರಿಶೀಲನೆ ನಡೆಸುತ್ತಿರುವುದು ದೃಶ್ಯಗಳಲ್ಲಿ ನೋಡಬಹುದು.

ಮಡಿಕೇರಿ: ಸಮಾಜದಲ್ಲಿ ನಮ್ಮೊಂದಿಗೆ ಬದುಕುತ್ತಿರುವ ಆದರೆ ಮಾನವಕುಲಕ್ಕೆ ಸೇರಿದವರೆಂದು ಕರೆಸಿಕೊಳ್ಳಲು ಯೋಗ್ಯರಲ್ಲದ ಕೆಲವರಲ್ಲಿ ಅದೆಷ್ಟು ಕ್ರೌರ್ಯ (cruelty), ಪೈಶಾಚಿಕತೆ, ಕಾಮುಕತನ ಮಡುಗಟ್ಟಿದೆ ಅಂತ ನಾವು ಕಲ್ಪಿಸಿಕೊಳ್ಳುವುದೂ ಸಾಧ್ಯವಿಲ್ಲ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದ (Surlabbi village) ನಿವಾಸಿ ಮತ್ತು ನಿನ್ನೆಯಷ್ಟೇ ಹತ್ತನೇ ತರಗತಿ ಪಾಸಾಗಿ ಭವಿಷ್ಯದ ಓದಿನ ಬಗ್ಗೆ ಕನಸು ಹೆಣೆಯುತ್ತಿದ್ದ 16-ವರ್ಷದ ಬಾಲಕಿಯೊಬ್ಬಳನ್ನು (minor girl) ಆಕೆಯೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಬರ್ಬರವಾಗಿ ಕೊಂದು ಹಾಕಿದ್ದಾನೆ. ಅವನಲ್ಲಿ ಅದೆಷ್ಟು ರೋಷ ಮತ್ತು ಸೇಡಿನ ಭಾವನೆ ಮಡುಗಟ್ಟಿತ್ತು ಅಂದರೆ ಬಾಲಕಿಯ ರುಂಡವನ್ನು ಬೇರ್ಪಡಿಸಿ ಅದರೊಂದಿಗೆ ಪರಾರಿಯಾಗಿದ್ದಾನೆ. ಬಾಲಕಿ ಅಪ್ರಾಪ್ತಳಾಗಿದ್ದರಿಂದ ಮದುವೆ ಮುಂದೂಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಕೆಯ ಪೋಷಕರ ಮನವೊಲಿಸಿದ್ದರು. ವಿಷಯ ಗೊತ್ತಾದ ಬಳಿಕ ಕುಪಿತಗೊಂಡ ಓಂಕಾರಪ್ಪ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪಾಶವೀ ಕೃತ್ಯವೆಸಗಿದ್ದಾನೆ. ಕೊಲೆ ನಡೆದ ಸ್ಥಳವನ್ನು ಕೊಡಗು ಹೆಚ್ಚುವರಿ ಎಸ್ ಪಿ ಸುಂದರ್ ರಾಜ್, ಎಫ್ ಎಸ್ ಎಲ್ ತಂಡ ಮತ್ತು ಶ್ವಾನದಳ ಪರಿಶೀಲನೆ ನಡೆಸುತ್ತಿರುವುದು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೊಡಗು: ಎಸ್​ಎಸ್​​ಎಲ್​ಸಿಯಲ್ಲಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.