ದರ್ಶನ್​ ಬರಮಾಡಿಕೊಳ್ಳಲು ಬಳ್ಳಾರಿ ಸೆಂಟ್ರಲ್​ ಜೈಲಿನಲ್ಲಿ ಹೇಗೆಲ್ಲಾ ಸಿದ್ಧತೆಗಳು ನಡೆದಿವೆ ನೋಡಿ

Updated on: Aug 27, 2024 | 7:46 PM

ಬೆಂಗಳೂರಿನ ಪರಪ್ಪರ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ಹಿನ್ನೆಲೆಯಲ್ಲಿ ನಟ ದರ್ಶನ್​ನನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಇದಕ್ಕೆ ಕೋರ್ಟ್ ಸಹ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ದಾಸನನ್ನು ಬರಮಾಡಿಕೊಳ್ಳಲು ಬಳ್ಳಾರಿ ಸೆಂಟ್ರಲ್​ ಜೈಲಿನಲ್ಲಿ ಭರದ ಸಿದ್ಧತೆಗಳು ನಡೆದಿವೆ.

ಬಳ್ಳಾರಿ, (ಆಗಸ್ಟ್ 27): ಬೆಂಗಳೂರಿನ ಪರಪ್ಪರ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರ ಸಿಗರೇಟ್ ಪಾರ್ಟಿ ಫೋಟೋ ವೈರಲ್ ಆದ ಬೆನ್ನಲ್ಲೇ ನಟ ದರ್ಶನ್​ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿ 24ನೇ ಎಸಿಎಂಎಂ ಕೋರ್ಟ್​ ಆದೇಶ ನೀಡಿದೆ. ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲಿನಲ್ಲಿರುವ ದರ್ಶನ್ ಅವರನ್ನು ಸದ್ಯ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ಇವರಷ್ಟೇ ಅಲ್ಲದೇ ದರ್ಶನ್ ಗ್ಯಾಂಗ್​ನ ಇತರೆ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪ್ರಕರಣದಲ್ಲಿ ದರ್ಶನ್ ಸೇರಿ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದರು. ಈ ಮನವಿಯನ್ನು ವಿಚಾರಣೆ ಮಾಡಿದ ಕೋರ್ಟ್ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಿ ಆದೇಶ ಹೊರಡಿಸಿದೆ.

ಕೋರ್ಟ್ ಆದೇಶ ಹಿನ್ನೆಲೆ ಇತ್ತ ಅಲರ್ಟ್ ಆದ ಬಳ್ಳಾರಿ ಜೈಲು ಅಧಿಕಾರಿಗಳು, ಜೈಲಿನ ವಿಐಪಿ ಸೆಲ್​ಗಳ ಅಂತಿಮ ಹಂತದ ಪರಿಶೀಲನೆ ನಡೆಸಿದರು. ಅಲ್ಲದೇ ಜೈಲಿನ ಸಿಸಿ ಕ್ಯಾಮರಾಗಳನ್ನು ಸಹ ಪರಿಶೀಲಿಸಿದರು. ಹಾಗೇ ವಿಐಪಿ ಸೆಲ್‌ಗಳ ಅಂತಿಮ ಹಂತದ ಪರಿಶೀಲನೆ ನಡೆಸಿದ್ದು, ಮಧ್ಯರಾತ್ರಿ ದರ್ಶನ್​ನನ್ನು ಜೈಲಿಗೆ ಕರೆ ತರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಜೈಲಿನ ಸುತ್ತ ಫುಲ್​ ಟೈಟ್ ಸೆಕ್ಯೂರಿಟಿ ಇದೆ. ಇನ್ನು ದರ್ಶನ್​ನನ್ನು ಅಟ್ಯಾಚ್ ಬಾತ್​ರೂಮ್ ಇರುವ ಸೆಲ್​ನಲ್ಲಿ ಇರಿಸುವ ಸಾಧ್ಯತೆಗಳಿವೆ.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More