Dissent in KPCC | ಜಿ ಪರಮೇಶ್ವರ್ ಬೇಜಾರೇನೂ ಮಾಡಿಕೊಂಡಿಲ್ಲ ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ: ಎಂ ವೀರಪ್ಪ ಮೊಯ್ಲಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 04, 2023 | 12:17 PM

ಪಕ್ಷದ ನಾಯಕರ ನಡುವೆ ಏನೂ ನಡೆದೇ ಇಲ್ಲ ಎಲ್ಲವೂ ಸರಿಯಾಗಿದೆ, ಅಸಮಾಧಾನ, ಬಂಡಾಯ, ಭಿನ್ನಮತ ಯಾವುದೂ ಇಲ್ಲ ಎಂಬ ಚಿತ್ರಣ ನೀಡಲು ಮೊಯ್ಲಿ ಪ್ರಯತ್ನಿಸಿದರು.

ಮೈಸೂರು:  ಶುಕ್ರವಾರ ನಾವು ಈ ಬಗ್ಗೆ ಚರ್ಚೆ ಮಾಡಿದ್ದೆವು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ ಜಿ ಪರಮೇಶ್ವರ್ (G Parameshwara) ಅವರು ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತಮ್ಮ ಅಸಮಾಧಾನ ಬಹಿರಂಗಗೊಳಿಸಿದ್ದರು. ಶನಿವಾರ ಮೈಸೂರಿಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಮ್ ವೀರಪ್ಪ ಮೊಯ್ಲಿ (Veerappa Moily) ಅವರಿಗೆ ಪಕ್ಷದಲ್ಲಿ ಹೆಚ್ಚುತ್ತಿರುವ ಭಿನ್ನಮತದ ಬಗ್ಗೆ ಪ್ರಶ್ನಿಸಿದಾಗ, ಪಕ್ಷದ ನಾಯಕರ ನಡುವೆ ಏನೂ ನಡೆದೇ ಇಲ್ಲ ಎಲ್ಲವೂ ಸರಿಯಾಗಿದೆ, ಅಸಮಾಧಾನ, ಬಂಡಾಯ, ಭಿನ್ನಮತ (dissent) ಯಾವುದೂ ಇಲ್ಲ ಎಂಬ ಚಿತ್ರಣ ನೀಡಲು ಪ್ರಯತ್ನಿಸಿದರು. ತಾವು ಖುದ್ದು, ಪರಮೇಶ್ವರ್ ಅವರೊಂದಿಗೆ ಮಾತಾಡಿದ್ದು ಅವರು ಬೇಜಾರು ಮಾಡಿಕೊಂಡಿಲ್ಲ ಎಂದು ಮೊಯ್ಲಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.