ತುಮಕೂರು: ಎರಡು ಬಾರಿಯೂ ಸಿದ್ದರಾಮಯ್ಯರಿಂದ ಸಿಎಂ ಹುದ್ದೆ ತಪ್ಪಿಸಿಕೊಂಡ ಜಿ ಪರಮೇಶ್ವರ್ ಆ ಕಹಿಯನ್ನು ಮರೆತಿದ್ದಾರೆ!

ಆದರೆ, ದಲಿತ ನಾಯಕರೊಬ್ಬರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಕೂಗು ಕೇಳಿ ಬಂದ ಕಾರಣ ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ ಹೆಸರುಗಳು ಆ ಉನ್ನತ ಸ್ಥಾನಕ್ಕಾಗಿ ಮುಂಚೂಣಿಯಲ್ಲಿದ್ದವು. ಆದರೆ ಸಿದ್ದರಾಮಯ್ಯ ಅದ್ಹ್ಯಾಗೋ ಹೈ ಕಮಾಂಡ್ ಮನವೊಲಿಸಿ ಸಿಎಂ ಕುರ್ಚಿಯಲ್ಲಿ ಕುಳಿತುಬಿಟ್ಟರು! ಭ್ರಮನಿರಸನಗೊಂಡಿದ್ದ ಪರಮೇಶ್ವರ್ ಸಾರ್ವಜನಿಕವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು

ತುಮಕೂರು: ಎರಡು ಬಾರಿಯೂ ಸಿದ್ದರಾಮಯ್ಯರಿಂದ ಸಿಎಂ ಹುದ್ದೆ ತಪ್ಪಿಸಿಕೊಂಡ ಜಿ ಪರಮೇಶ್ವರ್ ಆ ಕಹಿಯನ್ನು ಮರೆತಿದ್ದಾರೆ!
|

Updated on: Sep 06, 2023 | 4:35 PM

ತುಮಕೂರು: ಅದೊಂದು ಕಾಲವಿತ್ತು, ಸಿದ್ದರಾಮಯ್ಯ (Siddaramaiah) ಮತ್ತು ಜಿ ಪರಮೇಶ್ವರ (G Parameshwara) ಅವರ ನಡುವೆ ಎಲ್ಲವೂ ಸರಿಯಿಲ್ಲ ಅಂತ ರಾಜಕೀಯ ಮತ್ತ್ತು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದ್ದ ಕಾಲ. ಅದು ಸಹಜವೂ ಆಗಿತ್ತು. ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಸಿದ್ದರಾಮಯ್ಯರನ್ನು ಈಗಲೂ ಸಿದ್ದರಾಮಯ್ಯರನ್ನು ಔಟ್ ಸೈಡರ್ (outsider) ಅಂತಲೇ ಪರಿಗಣಿಸುತ್ತಾರೆ. 2013 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ನಿಸ್ಸಂದೇಹವಾಗಿ ನಿರ್ಣಾಯಕ ಪಾತ್ರ ನಿರ್ವಹಿಸಿದ್ದರು. ಆದರೆ, ದಲಿತ ನಾಯಕರೊಬ್ಬರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಕೂಗು ಕೇಳಿ ಬಂದ ಕಾರಣ ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ ಹೆಸರುಗಳು ಆ ಉನ್ನತ ಸ್ಥಾನಕ್ಕಾಗಿ ಮುಂಚೂಣಿಯಲ್ಲಿದ್ದವು. ಆದರೆ ಸಿದ್ದರಾಮಯ್ಯ ಅದ್ಹ್ಯಾಗೋ ಹೈ ಕಮಾಂಡ್ ಮನವೊಲಿಸಿ ಸಿಎಂ ಕುರ್ಚಿಯಲ್ಲಿ ಕುಳಿತುಬಿಟ್ಟರು! ಭ್ರಮನಿರಸನಗೊಂಡಿದ್ದ ಪರಮೇಶ್ವರ್ ಸಾರ್ವಜನಿಕವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. 2023 ರ ವಿಧಾನ ಸಭೆ ಚುನಾವಣೆ ನಂತರವೂ ಪರಮೇಶ್ವರ್ ಮುಖ್ಯಮಂತ್ರಿ ಹುದ್ದೆ ರೇಸ್ ನಲ್ಲಿ ತಾನೂ ಇರುವುದಾಗಿ ಹೇಳಿದ್ದರು. ಆದರೆ ದೆಹಲಿಯಲ್ಲಿ ನಡೆದ ಕತೆ ಕನ್ನಡಿಗರಿಗೆ ಗೊತ್ತಿದೆ ಈ ಕಹಿಯನ್ನೂ ಪರಮೇಶ್ವರ್ ಮರೆತಂತಿದೆ. ಮಧುಗಿರಿಯಲ್ಲಿ ಕ್ಷೀರಭಾಗ್ಯದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಅವರ ಮತ್ತು ಸಿದ್ದರಾಮಯ್ಯ ನಡುವಿನ ಬಾಂಧವ್ಯ ಮತ್ತು ಆತ್ಮೀಯತೆ ಕಂಡು ಇದೆಲ್ಲ ನೆನಪಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು